ಕಾರವಾರ ರಸ್ತೆಯಲ್ಲಿ ಅಪಘಾತ: ಲಾರಿಯಲ್ಲಿ ಸಿಕ್ಕ ಚಾಲಕನನ್ನ ತೆಗೆದದ್ದು ಹೇಗೆ ಗೊತ್ತಾ…!

Spread the love

ಹುಬ್ಬಳ್ಳಿ: ನಗರದಿಂದ ಬೆಳಗಾವಿ ಹೊರಟಿದ್ದ ಸಶಸ್ತ್ರ ಮೀಸಲು ಪಡೆಯ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಲಾರಿ ಚಾಲಕ ಲಾರಿಯಲ್ಲೇ ಸಿಲುಕಿಕೊಂಡಿದ್ದು, ಸುಮಾರು ಹೊತ್ತು ಕಾರ್ಯಾಚರಣೆ ಮಾಡಿ ಹೊರಗೆ ತೆಗೆದ ಘಟನೆ ನಡೆದಿದೆ.

ಬೆಳಗಾವಿಗೆ ಹೊರಟಿದ್ದ ಪೊಲೀಸ್ ವಾಹನಕ್ಕೆ ವೇಗವಾಗಿ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ, ಲಾರಿಯ ಮುಂಭಾಗ ಒಳಗೆ ಹೋಗಿ, ಚಾಲಕ ಅಲ್ಲಿಯೇ ಸಿಲುಕಿಕೊಂಡಿದ್ದರು.

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸ್ಥಳೀಯರು ಹಾಗೂ ಪೊಲೀಸರು ಲಾರಿಗೆ ಹಗ್ಗವನ್ನ ಕಟ್ಟಿ, ಗಂಭೀರ ಸ್ಥಿತಿಯಲ್ಲಿದ್ದ ಲಾರಿ ಚಾಲಕನನ್ನ ಹೊರಗೆ ತೆಗೆಯಲಾಯಿತು. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply