Breaking News

ಸಿಮ್‌ ಬ್ಲಾಕ್‌ ಸಂದೇಶ; ಒಟಿಪಿ ಪಡೆದು ₹1.51 ಲಕ್ಷ ವಂಚನೆ

Spread the love

ಹುಬ್ಬಳ್ಳಿ: ಸಿಮ್‌ ಬ್ಲಾಕ್‌ ಓಪನ್‌ ಮಾಡಲು ಮೊಬೈಲ್‌ಗೆ ಟೀಮ್‌ ವೀವರ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ತಿಳಿಸಿದ ವಂಚಕ, ನಗರದ ಯಲ್ಲಾಪರ ಓಣಿಯ ವಿಜಯಲಕ್ಷ್ಮಿ ಗಂಗಣ್ಣವರ ಎಸ್‌ಬಿಐ ಖಾತೆಯಿಂದ ₹1.51 ಲಕ್ಷ ವರ್ಗಾಯಿಸಿಕೊಂಡಿದ್ದಾನೆ.
ವಿಜಯಲಕ್ಷ್ಮಿ ಅವರ ಮೊಬೈಲ್‌ಗೆ ಸಿಮ್‌ ಬ್ಲಾಕ್‌ ಆಗಿರುವ ಸಂದೇಶ ಬಂದಿದ್ದು, ಅದನ್ನು ಓಪನ್‌ ಮಾಡಲು ಅದರಲ್ಲಿರುವ ಮೊಬೈಲ್‌ ನಂಬರ್‌ಗೆ ಕರೆ ಮಾಡುವಂತೆ ತಿಳಿಸಲಾಗಿತ್ತು. ಆ ನಂಬರ್‌ಗೆ ಕರೆ ಮಾಡಿದಾಗ ಟೀಮ್‌ ವೀವರ್‌ ಡೌನ್‌ಲೋಡ್‌ ಮಾಡಿಕೊಂಡು ಅಳವಡಿಸಿಕೊಳ್ಳಬೇಕು ಎಂದು ವಂಚಕ ತಿಳಿಸಿದ್ದ. ಡೌನ್ಲೋಡ್‌ ಮಾಡಿಕೊಂಡ ಆ್ಯಪ್‌ಗೆ ಎಕ್ಸೆಸ್‌ ನೀಡಿ, ಹಣ ವರ್ಗಾಯಿಸಿಕೊಂಡಿದ್ದಾನೆ. ಹುಬ್ಬಳ್ಳಿ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Karnataka Junction

[ajax_load_more]

Check Also

ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ

Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ …

Leave a Reply

error: Content is protected !!