Breaking News

ನಾಳೆ ಬಿಎಸ್ ವೈ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ

Spread the love

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಗೆ ನಾಳೆ ಮಧ್ಯಾಹ್ನ 2 ಗಂಟೆಗೆ ಸಮಯಾವಕಾಶ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಜುಲೈ 26 ರಂದು ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಸಿಎಂ ಕಚೇರಿಯಿಂದ ಮನವಿ ಮಾಡಲಾಗಿತ್ತು. ಆದ್ರೆ ರಾಜ್ಯಪಾಲರು ನವದೆಹಲಿ ಪ್ರವಾಸದಲ್ಲಿದ್ದ ಕಾರಣ ಸೋಮವಾರ ಭೇಟಿಗೆ ಸಮ್ಮತಿಸಿದ್ದರೂ ಸಮಯ ಅಂತಿಮಗೊಳಿಸಿರಲಿಲ್ಲ.ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಭಾಗಿಯಾಗಲಿರುವ ಸಿಎಂ ಯಡಿಯೂರಪ್ಪ, ನಂತರ ವಿಧಾನಸೌಧದ ತಮ್ಮ ಕಚೇರಿಗೆ ತೆರಳಿ ಕೆಲ ಸಮಯ ಇರಲಿದ್ದಾರೆ. ಈ ವೇಳೆ ಆಪ್ತ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ನೇರವಾಗಿ 2 ಗಂಟೆಗೆ ರಾಜಭವನಕ್ಕೆ ತೆರಳಲಿರುವ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡುವರು.ನಾಳಿನ ಸಿಎಂ ರಾಜ್ಯಪಾಲರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ರಾಜೀನಾಮೆ ಬಗ್ಗೆ ಸಿಎಂ ಇನ್ನೂ ಸ್ಪಷ್ಟವಾಗಿ ಏನೂ ಹೇಳಿಲ್ಲ, ಎಲ್ಲವೂ ಹೈಕಮಾಂಡ್ ಸಂದೇಶದ ಮೇಲೆ ನಿರ್ಧಾರ ಎಂದಿದ್ದಾರೆ. ಹಾಗಾಗಿ ನಾಳೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಪತ್ರ ನೀಡಲಿದ್ದಾರಾ ಅಥವಾ ಕೇವಲ ಮಾತುಕತೆ ನಡೆಸಿ ಬರಲಿದ್ದಾರಾ ಎನ್ನುವುದು ಗೊತ್ತಾಗಬೇಕಿದೆ.


Spread the love

About Karnataka Junction

[ajax_load_more]

Check Also

ಕರ್ನಾಟಕ ರೈಲ್ವೆಗೆ ಕೇಂದ್ರ ಸರ್ಕಾರದಿಂದ ಯುಪಿಎ ಅವಧಿಗಿಂತ 9 ಪಟ್ಟು ಹೆಚ್ಚಿನ ಬಜೆಟ್*

Spread the love*- ಯುಪಿಎ ಸರ್ಕಾರ 5 ವರ್ಷದಲ್ಲಿ ವಾರ್ಷಿಕ 835 ಕೋಟಿ ನೀಡಿದ್ದರೆ; ಮೋದಿ ಸರ್ಕಾರದಿಂದ ಪ್ರಸ್ತುತ ಬಜೆಟ್ …

Leave a Reply

error: Content is protected !!