ಕೋವಿಡ್ ಮೂರನೆ ಅಲೆಯ ಸಿದ್ಧತೆ ಆಗಿದೆ- ಜಗದೀಶ್ ಶೆಟ್ಟರ್

Spread the love

ಹುಬ್ಬಳ್ಳಿ: ಯಾರ ಯಾರೋ ಚರ್ಚೆ ಮಾಡುವುದಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ನಿಮಗೆ ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಸಿಎಂ ಸ್ಥಾನಕ್ಕೆ ಉತ್ತರ ಕರ್ನಾಟಕ ಅಭ್ಯರ್ಥಿ ಮುನ್ನೆಲೆಗೆ ಬಂದಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಈ ಬಗ್ಗೆ ಗೊತ್ತಿಲ್ಲ ಅಲ್ಲದೇ ಇದರ ಬಗ್ಗೆ ಮಾತನಾಡಿದ್ದಾರೋ ಅವರನ್ನೇ ಕೇಳಿ. ನಾನು ಇದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಅವರು ಹೇಳಿದರು.
ಕೋವಿಡ್ ಮೂರನೆ ಅಲೆಯ ಸಿದ್ಧತೆ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಎಲ್ಲ ರೀತಿಯ ಸಿದ್ಧತೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದೇನೆ ಎಲ್ಲ ರೀತಿಯಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಇನ್ನೂ ಅವಳಿನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅವಳಿನಗರದಲ್ಲಿ ಕ್ರೈಂ ಪ್ರಕರಣ ಹೆಚ್ಚಾಗುತ್ತಿದ್ದು,ಈ ಬಗ್ಗೆ ಪೊಲೀಸ್ ಕಮೀಷನರ್ ಜೊತೆಗೆ ಮಾತನಾಡಿದ್ದೇನೆ‌. ಕ್ರೈಂಗಳಲ್ಲಿ ಭಾಗಿಯಾಗುವವರ ವಿರುದ್ಧ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply