- ಧಾರವಾಡ; ಕೊರೊನಾ ನಿಯಂತ್ರಿಸಲು ಕಠಿಣ ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ , ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ.27 ಗುರುವಾರ , ಮೇ.28 ಶುಕ್ರವಾರ ಹಾಗೂ ಮೇ.29 ಶನಿವಾರ ಈ ಮೂರು ದಿನಗಳ ಕಾಲ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ.
ಹೆಚ್ಚು ಜನದಟ್ಟಣೆಯಾಗಬಾರದು ಎಂಬ ಉದ್ದೇಶದಿಂದ ಕಿರಾಣಿ ಹಾಗೂ ಮಾಂಸ ಮಾರಾಟದ ಸಮಯದ ಅವಧಿ ವಿಸ್ತರಿಸಲಾಗಿದೆ. ಹುಬ್ಬಳ್ಳಿ ಹಾಗೂ ಧಾರವಾಡದ ಕಿರಾಣಿ ವರ್ತಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರು ಏಕಕಾಲಕ್ಕೆ ಅಂಗಡಿಗಳ ಮುಂದೆ ಜನಸಂದಣಿ ಉಂಟು ಮಾಡದೇ ಪ್ರತ್ಯೇಕವಾಗಿ ಬಂದು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಕಿರಾಣಿ ,ಮಾಂಸದ ಪದಾರ್ಥಗಳನ್ನು ಖರೀದಿಸಬೇಕು.ಈ ಮೂರು ದಿನಗಳ ಅವಕಾಶದ ನಂತರ ಕಠಿಣ ಲಾಕ್ಡೌನ್ ಅವಧಿ ಪೂರ್ಣಗೊಂಡ ಬಳಿಕ ಜೂನ್ 7 ರ ನಂತರವೇ ಈ ವಸ್ತುಗಳು ದೊರೆಯಲಿವೆ. ತರಕಾರಿ ಮತ್ತು ಹಾಲು ಮಾರಾಟಕ್ಕೆ ಪ್ರತಿದಿನ ಬೆಳಿಗ್ಗೆ 6 ರಿಂದ 8 ರವರೆಗೆ ಅವಕಾಶ ಇರುವುದರಿಂದ ಇವುಗಳ ಪೂರೈಕೆ ಎಂದಿನಂತೆಯೇ ಇರುತ್ತದೆ.ಇವುಗಳ ಸಮಯದಲ್ಲಿ ಬದಲಾವಣೆಯಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸ್ ನಂಬರ್ …