Breaking News

ಕುಡಿದ ಅಮಲಿನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ-

Spread the love

ಹುಬ್ಬಳ್ಳಿ : ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡು ಬಾರ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಹುಬ್ಬಳ್ಳಿಯ ಶಿರೂರ ಪಾರ್ಕ್‌ನ ಸಿಲ್ವರ್ ಸ್ಟೋನ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.
ಬಾರ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ನಡುವೆ ಗಲಾಟೆ ಆಗಿದೆ. ಗಲಾಟೆ ಬಿಡಿಸಲು ಮುಂದಾದ ಸಿಬ್ಬಂದಿಗೆ ಮೂವರು ಸೇರಿ ಒಡೆದ ಬಾಟಲಿಯಿಂದ ಹಲ್ಲೆ ನಡೆಸಿ ಹತ್ಯೆಗೆ ಪ್ರಯತ್ನಿಸಿದ್ದಾರೆ. ಹೊಸೂರಿನ ಸುಪ್ರೀತ್, ಆದಿತ್ಯ ಹಾಗೂ ಪ್ರಜ್ವಲ್ ಎಂಬಾತ ಸೇರಿ ನಾಲ್ವರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಗೊಂಡು ಚಿಕಿತ್ಸೆ ಪಡೆದ ಬಾರ್ ಸಿಬ್ಬಂದಿಆರೋಪಿಗಳು ಸ್ನೇಹಿತರ ಜೊತೆ ಮದ್ಯ ಸೇವನೆ ಮಾಡುತ್ತಿದ್ದಾಗ ಪಕ್ಕದ ಟೇಬಲ್‌ನಲ್ಲಿ ಕುಳಿತವರ ಜೊತೆ ಜಗಳ ಮಾಡಿ ಬಾಟಲಿ ಒಡೆದು ಹಲ್ಲೆಗೆ ಯತ್ನಿಸಿದ್ದರು. ಬಾರ್ ವ್ಯವಸ್ಥಾಪಕ ಮಂದಾ‌ರ್ ಮತ್ತು ಸಿಬ್ಬಂದಿ ಮಿಥುನ್ ಅದನ್ನು ತಡೆಯಲು ಮುಂದಾದಾಗ ಅಶ್ಲೀಲವಾಗಿ ಬೈದು ಅವರ ಮೇಲೆಯೇ ಹಲ್ಲೆ ನಡೆಸಿದ್ದಾರೆ.
ಅದನ್ನು ತಪ್ಪಿಸಲು ಹೋದ ಸಿಬ್ಬಂದಿ ರವಿ, ಮಂಜುನಾಥ ಮತ್ತು ಸಂತೋಷ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಸಂತೋಷ ಅವರ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ. ಬಾರ್​ನಲ್ಲಿ ಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


Spread the love

About Karnataka Junction

[ajax_load_more]

Check Also

ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ; ಬಿಸಿ ಮುಟ್ಟಿಸಿದ NCH*

Spread the love*-600 ಪ್ರಕರಣಗಳಲ್ಲಿ ವಂಚಿತ ಅಭ್ಯರ್ಥಿಗಳಿಗೆ ನ್ಯಾಯದಾನ; ಒಟ್ಟು ₹ 1.56 ಕೋಟಿ ಪರಿಹಾರ* *- ಬರೀ ವ್ಯವಹಾರಿಕವಾಗಿರದೆ …

Leave a Reply

error: Content is protected !!