ಚಾಕು ಇರಿತ ಪ್ರಕರಣ ಕೊಲೆ: ನಾಲ್ವರು ಆರೋಪಿಗಳ ಬಂಧನ

Spread the love

ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿಯ ಬ್ರಹ್ಮಾನಂದ ಶಾಲೆ ಬಳಿ ಇತ್ತೀಚೆಗೆ ನಡೆದಿದ್ದ ನೇಕಾರ ನಗರದ ನೂರಾನಿ ಪ್ಲಾಟ್‌ನ ಮುಸ್ತಾಕ್‌ಅಲಿ ಅತ್ತಾರ(23) ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೂರಾನಿ ಪ್ಲಾಟ್‌ನ ಮಲೀಕ್, ಗೌಸ್, ಮೋಹ್ಸಿನ್ ಹಾಗೂ ಅಖ್ತರ್ ಬಂಧಿತರು.
ಪ್ರಮುಖ ಆರೋಪಿ ಮಲೀಕ್‌ ಸಹೋದರಿಯನ್ನು ಮೃತ ಅತ್ತಾರ ಪೀಡಿಸುತ್ತಿದ್ದ. ಇದೇ ವಿಷಯಕ್ಕೆ ಮಲೀತ್ ತನ್ನ ಸಹಚರರೊಂದಿಗೆ ಮೇ 15ರಂದು ರಾತ್ರಿ ಚಾಕುವಿನಿಂದ ಇರಿದು ಆತನನ್ನು ಕೊಲೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply