Breaking News

ಕೊರೊನಾ ರೋಗಿಗಳನ್ನ ಆಸ್ಪತ್ರೆಗೆ ಕರೆದೊಯ್ಯುವ ವಾಹನಗಳಿಗೆ ಸಚಿವರಿಂದ ಚಾಲನೆ

Spread the love

ಶಿರಸಿ: ಶಾಸಕರ ಅನುದಾನದಲ್ಲಿ ಕೊರೊನಾ ಸೋಂಕಿತ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ನೀಡಿರುವ ಹೊಸ ಆಂಬ್ಯುಲೆನ್ಸ್​ಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಚಾಲನೆ ನೀಡಿದರು.
ವಿಧಾನಸಭಾ ಸ್ವಕ್ಷೇತ್ರ ಯಲ್ಲಾಪುರಕ್ಕೆ ನಾಲ್ಕು ಆಂಬ್ಯುಲೆನ್ಸ್ ವಾಹನಗಳನ್ನು ಖರೀದಿಸಲಾಗಿದೆ. ಹೊಸದಾಗಿ ಬಂದ ಆಂಬ್ಯುಲೆನ್ಸ್ ಏರಿ ಕುಳಿತ ಸಚಿವರು ತಾವೇ ವಾಹನ ಚಲಾಯಿಸಿದರು. ಈ ಮೂಲಕ ಯಲ್ಲಾಪುರದ ಪ್ರವಾಸಿ ಮಂದಿರದಿಂದ ಆರಂಭಿಸಿ ಯಲ್ಲಾಪುರ ನಗರಕ್ಕೆ ಒಂದು ಸುತ್ತುಹಾಕಿದರು. ಇದೇ ವೇಳೆ ಪಕ್ಕದ ಸೀಟಿನಲ್ಲಿ ಕುಳಿತು ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಬಳಿ, ‘ಕೇಸ್​ ಆಗಲ್ಲ, ನನ್ನ ಹತ್ತಿರ ಲೈಸನ್ಸ್ ಇದೆ’ ಎಂದು ನಗೆಚಟಾಕಿ ಹಾರಿಸಿದರು.ಆಂಬುಲೆನ್ಸ್ ಚಲಾಯಿಸಿದ ಸಚಿವ ಹೆಬ್ಬಾರ್ ಅವರಿಗೆ ಈ ಹಿಂದೆ ಲಾರಿ ಚಾಲಕರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ. ನಂತರ ಬಿಜೆಪಿಯಲ್ಲಿ ಕಾರ್ಯಕರ್ತರಾಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕೆಲವು ರಾಜಕೀಯ ಕಾರಣಕ್ಕೆ ಕಾಂಗ್ರೆಸ್​ಗೆ ಬರುವ ಮೂಲಕ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಅದರ ನಂತರ ಪುನಃ ಬಿಜೆಪಿ ಸೇರ್ಪಡೆಯಾಗಿ ಇದೀಗ ರಾಜ್ಯ ಕಾರ್ಮಿಕ ಸಚಿವರಾಗಿದ್ದಾರೆ.


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!