Breaking News

ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು

Spread the love

ಹುಬ್ಬಳ್ಳಿ: ಹಳೇಹುಬ್ಬ‌ಳ್ಳಿಯಲ್ಲಿ ನಡೆದ ಗಲಭೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಪ್ರೇರಣೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಆರೋಪಿಸಿದ್ದು, ಅವರಿಂದ ವಾರದೊಳಗೆ ದಾಖಲೆ ಪಡೆಯಬೇಕು. ಇ‌ಲ್ಲದಿದ್ದರೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ವೇದವ್ಯಾಸ ಕೌಲಗಿ ಅವರು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದಾರೆ.
ನಳಿನ್ ಕುಮಾರ್‌ ಅವರು ಆಧಾರರಹಿತವಾಗಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದು, ಅವರ ಹೇಳಿಕೆಯಿಂದ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಲಿದೆ. ಹೀಗಾಗಿ, ಅವರಿಗೆ ನೋಟಿಸ್‌ ಜಾರಿ ಮಾಡಬೇಕು. ಒಂದೊಮ್ಮೆ ಸಮರ್ಪಕ ಮಾಹಿತಿ ನೀಡದಿದ್ದರೆ, ಎಫ್‌ಐಆರ್‌ ದಾಖಲಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ; ಬಿಸಿ ಮುಟ್ಟಿಸಿದ NCH*

Spread the love*-600 ಪ್ರಕರಣಗಳಲ್ಲಿ ವಂಚಿತ ಅಭ್ಯರ್ಥಿಗಳಿಗೆ ನ್ಯಾಯದಾನ; ಒಟ್ಟು ₹ 1.56 ಕೋಟಿ ಪರಿಹಾರ* *- ಬರೀ ವ್ಯವಹಾರಿಕವಾಗಿರದೆ …

Leave a Reply

error: Content is protected !!