ಅಂತ್ಯಕ್ರಿಯೆ ಸ್ಥಳಕ್ಕೆ ಡಿಸಿಪಿ ಲಾ ಆ್ಯಂಡ್ ಆರ್ಡರ್ ಭೇಟಿ: ಪರಿಶೀಲನೆ ನಡೆಸಿದ ಸಾಹಿಲ್ ಬಾಗ್ಲಾ

Spread the love

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಸ್ತು ತಜ್ಞ ಚಂದ್ರಶೇಖರ ಗೂರುಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರ ವಲಯದ ಸುಳ್ಳ ರಸ್ತೆಯ ಶಿವ ಪ್ರಭು ಬಡಾವಣೆಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿರುವ ಬೆನ್ನಲ್ಲೇ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೌದು..ಅಂತ್ಯಕ್ರಿಯೆ ನೆರವೇರಿಸುವ ಸ್ಥಳ ಪರಿಶೀಲನೆ ನಡೆಸಿದ ಡಿಸಿಪಿ ಅವರು, ಓರ್ವ ಸಿಪಿಐ ಸ್ಥಳದಲ್ಲಿದ್ದು ಅಂತ್ಯಸಂಸ್ಕಾರಕ್ಕೆ ಅನುಕೂಲ ಆಗುವಂತೆ ಜನರಿಗೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದಾರೆ.
ಇನ್ನೂ ಗುರೂಜಿ ಸ್ವಂತ ಜಮೀನಿನಲ್ಲೇ ನೆರವೇರಲಿರುವ ಅಂತ್ಯಸಂಸ್ಕಾರದ ಸ್ಥಳದಲ್ಲಿ ಖಾಸಗಿ ಭದ್ರತಾ ಸಿಬ್ಬಂದಿ ಕೂಡಾ ‌ನಿಯೋಜನೆ ಮಾಡಲಾಗಿದೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply