Breaking News

ಸುರತ್ಕಲ್​ನಲ್ಲಿ ಯುವಕನ ಹತ್ಯೆ ಪ್ರಕರಣ: 21 ಜನ ಪೊಲೀಸ್ ವಶಕ್ಕೆ

Spread the love

ಮಂಗಳೂರು: ಮಂಗಳೂರಿನ ಸುರತ್ಕಲ್​ನಲ್ಲಿ ಗುರುವಾರ ಸಂಜೆ ನಡೆದ ಯುವಕನ ಹತ್ಯೆ ಪ್ರಕರಣದ ಸಂಬಂಧ 21 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್​ನ ಅಂಗಡಿಯೊಂದರ ಮುಂದೆ ನಿಂತಿದ್ದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್​ ಎಂಬಾತನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಲ್ಲಿ ಮೂವರು ಆರೋಪಿಗಳು ಫಾಜಿಲ್ ಮೇಲೆ ದಾಳಿ ಮಾಡಿರುವುದು ಕಂಡುಬಂದಿತ್ತು. ದುಷ್ಕರ್ಮಿಗಳು ಕಾರಿ‌ನಲ್ಲಿ ಬಂದಿರುವುದರಿಂದ ಕಾರನ್ನು ಪತ್ತೆ ಹಚ್ಚಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ
ಈ ಪ್ರಕರಣದಲ್ಲಿ ಇದುವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರೆಲ್ಲರನ್ನು ಶಂಕೆಯ ಆಧಾರದಲ್ಲಿ ವಶಕ್ಕೆ ಪಡೆದು ವಿಚಾರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Karnataka Junction

[ajax_load_more]

Check Also

ನಿರ್ಗತಿಕರಿಗೆ ಕರ್ನಾಟಕ ನವನಿರ್ಮಾಣ ವೇದಿಕೆ ವತಿಯಿಂದ ಬಟ್ಟೆ, ಆಹಾರ ಧಾನ್ಯ ವಿತರಣೆ

Spread the loveಹುಬ್ಬಳ್ಳಿ: ನವನಗರದ ಆರ್ ಟಿ ಓ ಕಚೇರಿ ಮುಂಭಾಗದಲ್ಲಿ ಅಲೆಮಾರಿ ಜನಾಂಗಕ್ಕೆ ಕರ್ನಾಟಕ ನವನಿರ್ಮಾಣ ವೇದಿಕೆ ವತಿಯಿಂದ …

Leave a Reply

error: Content is protected !!