Breaking News

ರಾಮ ರಾಮ ಎಂದು ರಾಮನ ಸ್ಥಳಕ್ಕೂ ಕನ್ನ ಹಾಕಿದ ಕಿರಾತಕರು

Spread the love

ಲಕ್ನೋ : ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಪಟ್ಟಿ ಬಿಡುಗಡೆ ಮಾಡಿದೆ.

ಅಕ್ರಮ ನಿವೇಶನಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಪ್ರಾಧಿಕಾರ ಆರೋಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ ಎರಡು ವರ್ಷಗಳಾಗಿವೆ.

ಇಂಜಿನಿಯರ್‌ಗಳ ಪ್ರಕಾರ 40 ಪ್ರತಿಶತದಷ್ಟು ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಮೊದಲ ಮಹಡಿ 2024ರ ಆರಂಭದಲ್ಲಿ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) 40 ಆರೋಪಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಇದರಲ್ಲಿ ಸ್ಥಳೀಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ, ಪಕ್ಷದ ಮಾಜಿ ಶಾಸಕ ಗೋರಖನಾಥ್ ಮತ್ತು ಮೇಯರ್ ರಿಷಿಕೇಶ್ ಉಪಾಧ್ಯಾಯ ಅವರ ಹೆಸರುಗಳಿವೆ.


Spread the love

About Karnataka Junction

[ajax_load_more]

Check Also

ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ; ಬಿಸಿ ಮುಟ್ಟಿಸಿದ NCH*

Spread the love*-600 ಪ್ರಕರಣಗಳಲ್ಲಿ ವಂಚಿತ ಅಭ್ಯರ್ಥಿಗಳಿಗೆ ನ್ಯಾಯದಾನ; ಒಟ್ಟು ₹ 1.56 ಕೋಟಿ ಪರಿಹಾರ* *- ಬರೀ ವ್ಯವಹಾರಿಕವಾಗಿರದೆ …

Leave a Reply

error: Content is protected !!