ರಾಮ ರಾಮ ಎಂದು ರಾಮನ ಸ್ಥಳಕ್ಕೂ ಕನ್ನ ಹಾಕಿದ ಕಿರಾತಕರು

Spread the love

ಲಕ್ನೋ : ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಪಟ್ಟಿ ಬಿಡುಗಡೆ ಮಾಡಿದೆ.

ಅಕ್ರಮ ನಿವೇಶನಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಪ್ರಾಧಿಕಾರ ಆರೋಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ ಎರಡು ವರ್ಷಗಳಾಗಿವೆ.

ಇಂಜಿನಿಯರ್‌ಗಳ ಪ್ರಕಾರ 40 ಪ್ರತಿಶತದಷ್ಟು ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಮೊದಲ ಮಹಡಿ 2024ರ ಆರಂಭದಲ್ಲಿ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) 40 ಆರೋಪಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಇದರಲ್ಲಿ ಸ್ಥಳೀಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ, ಪಕ್ಷದ ಮಾಜಿ ಶಾಸಕ ಗೋರಖನಾಥ್ ಮತ್ತು ಮೇಯರ್ ರಿಷಿಕೇಶ್ ಉಪಾಧ್ಯಾಯ ಅವರ ಹೆಸರುಗಳಿವೆ.


Spread the love

About gcsteam

    Check Also

    ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು

    Spread the loveಹುಬ್ಬಳ್ಳಿ:  ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ …

    Leave a Reply