Breaking News

ತೇಗೂರು ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ 8 ಜನರಿಗೆ ಗಾಯ

Spread the love

ಧಾರವಾಡ: ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲೆಂದು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ನಡೆದಿದೆ.ಬಳ್ಳಾರಿಯಿಂದ ಅನೇಕ ಜನ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಪ್ರತಿಭಟನೆ ನಡೆಸಲೆಂದು ಹೊರಟಿದ್ದ ವೇಳೆ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಆರೇಳು ಜನ ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲ ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Karnataka Junction

[ajax_load_more]

Check Also

ಧಾರವಾಡ: ನಿಟ್ಟುಸಿರು ಬಿಟ್ಟ ಸಿಎಂ ಸಿದ್ದು, ಸ್ನೇಹಮಯಿ ಅರ್ಜಿಯನ್ನೇ ವಜಾಗೊಳಿಸಿದ ಹೈಕೋರ್ಟ್*

Spread the loveಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಈ ಭ್ರಷ್ಟಾಚಾರದಲ್ಲಿ ಸಿಎಂ ಸೇರಿ ಅವರ …

Leave a Reply

error: Content is protected !!