Breaking News

ಛಾಯಾಚಿತ್ರಗಳ ಬೆಲೆ ಹೆಚ್ಚಳ ಅನಿವಾರ್ಯ: ಕಿರಣ‌ ಬಾಕಳೆ

Spread the love

ಹುಬ್ಬಳ್ಳಿ: ಫೋಟೋ ಹಾಗೂ ವಿಡಿಯೋಗ್ರಾಫರ್ ಅಸೋ ಸಿಯೇಷನ್ ವತಿಯಿಂದ ಛಾಯಾಚಿತ್ರಗಳ ಬೆಲೆಗಳನ್ನು ಸ್ವಲ್ಪ ಪರಿಷ್ಕರಿಸಿ, ಹೆಚ್ಚಿಸಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಅಸೋಸಿಯೇಷನ್ ಅಧ್ಯಕ್ಷ ಕಿರಣ ಬಾಕಳೆ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಬದುಕಿನಲ್ಲಿ ದಿನದಿಂದ ದಿನಕ್ಕೆ ಬೆಲೆ ಏರುಮುಖವಾಗುತ್ತಿದೆ. ಹಿಂದಿನ ಬೆಲೆಯಲ್ಲಿಯೇ ನಾವು ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಜೀವನ ನಡೆಸಲು ಸಾಲುತ್ತಿಲ್ಲ ಎಂದರು.
ಛಾಯಾ ವೃತ್ತಿಯ ಉಪಕರಣಗಳು, ಲೆನ್ಸ್, ಡಿಜಿಟಲ್ ಕ್ಯಾಮರಾ ಹಾಗೂ ಇನ್ನಿತರ ಸಾಮಗ್ರಿಗಳ ಬೆಲೆಗಳಲ್ಲಿ ಭಾರಿ ಏರಿಕೆಯಾಗಿದೆ. ಆದ್ದರಿಂದ ಸಂಘದ ಸದಸ್ಯರ ಬೇಡಿಕೆ ಪರಿಗಣಿಸಿ, ಸರ್ವ ಸದಸ್ಯರ ಸಭೆ ನಡೆಸುವ ಮೂಲಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಗ್ರಾಹಕರು ಆರ್ಡರ್ ಮಾಡುವಾಗ ಸಂಘದ ಸದಸ್ಯತ್ವದ ಗುರುತಿನ ಕಾರ್ಡ್ ಪರಿಶೀಲಿಸಿ ಖಚಿತ ಪಡಿಸಿಕೊಂಡು ಗುಣಮಟ್ಟದ ಕೆಲಸ ತೆಗೆದುಕೊಳ್ಳಬೇಕು. ಸಂಘದ ಸದಸ್ಯರಲ್ಲದವರು ಹೆಚ್ಚು ಹಣ ಪಡೆದರೆ ಸಂಘ ಸ್ಪಂದಿಸುವುದಿಲ್ಲ ಎಂದು ಕಿವಿ ಮಾತು ಹೇಳಿದರು.
ಉಪಾಧ್ಯಕ್ಷ ದಿನೇಶ ದಾಬಡೆ, ಕಾರ್ಯದರ್ಶಿ ರವೀಂದ್ರ ಕಾಟಿಗರ, ಖಜಾಂಚಿ ಅನಿಲ ತುರಮರಿ ಇತರರಿದ್ದರು.


Spread the love

About Karnataka Junction

[ajax_load_more]

Check Also

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ

Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …

Leave a Reply

error: Content is protected !!