Breaking News

ಆರೋಪಿ ಗಡಿಪಾರಿಗೆ ಅಣ್ಣಪ್ಪ ಓಲೇಕಾರ ಆಗ್ರಹ

Spread the love

ಆರೋಪಿ ಗಡಿಪಾರಿಗೆ ಅಣ್ಣಪ್ಪ ಓಲೇಕಾರ ಆಗ್ರಹ

ಕಲಘಟಗಿ (ಧಾರವಾಡ) ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಂತಹ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಗಡಿಪಾರ ಮಾಡಬೇಕೆಂದು ತಾಲೂಕಿನ ಬಿಜೆಪಿ ಮುಖಂಡರಾದ ಅಣ್ಣಪ್ಪ ಓಲೆಕಾರ್
ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು
ನೂತನ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ನಾಸೀರ ಹುಸೇನ ಬೆಂಬಲಿಗರು ಮತ್ತು ಕಾಂಗ್ರೆಸ್ ನಾಯಕರು ಈ ವೇಳೆ ಇದ್ಧು, ಇಂತಹ ಸಂದರ್ಭದಲ್ಲಿ ನಾಸೀರ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಇದೂ ಕಾಂಗ್ರೆಸ್ ನಾಯಕರ ತುಷ್ಟೀಕರಣ ರಾಜಕಾರಣಕ್ಕೆ ಕೈಗನ್ನಡಿಯಾಗಿದೆ. ಈ ಕೂಡಲೇ ನೂತನವಾಗಿ ಆಯ್ಕೆಯಾದ ರಾಜ್ಯ ಸಭಾ ಸದಸ್ಯ ನಾಸೀರ ಹುಸೇನ್ ಅವರು ರಾಜೀನಾಮೆ ನೀಡಬೇಕು. ಜೊತೆಗೆ ಘೋಷಣೆ ಕೂಗಿದ ಎಲ್ಲರನ್ನು ತನಿಖೆಗೆ ಒಳಪಡಿಸಿ ಇದರ ಹಿಂದೆ ಇರುವ ಸತ್ಯ ಬಯಲಿಗೆ ತರಬೇಕು ಎಂದು ಆಗ್ರಹಿಸಿದರು.


Spread the love

About Karnataka Junction

[ajax_load_more]

Check Also

ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ

Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ …

Leave a Reply

error: Content is protected !!