ಹುಬ್ಬಳ್ಳಿ ನಗರ; ರವಿನಗರದ್ದ ತೆಗ್ಗು ಗುಂಡಿಗಳಲ್ಲಿ ಪ್ರಧಾನಿ ಮೋದಿ, ಶೆಟ್ಟರ್ ಕಟೌಟ್ ಇರಿಸಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ

Spread the love

https://youtu.be/2hcBmgA437k
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆ ಯಾಗಿದ್ದರೂ ಕೂಡ ರಸ್ತೆ ಗುಂಡಿಗಳಿಗೆ ಮಾತ್ರ ಮುಕ್ತಿ ಸಿಗುತ್ತಿಲ್ಲ.
ಈ ಹಿನ್ನೆಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಗುಂಡಿಗಳಲ್ಲಿ ಪ್ರಧಾನಿ ಮೋದಿ ಹಾಗೂ ಸಚಿವ ಜಗದೀಶ್​ ಶೆಟ್ಟರ್ ಕಟೌಟ್​​​ಗೆ ಹೂ ಮಾಲೆ ಹಾಕಿ ಸನ್ಮಾನಿಸಿಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ರಸ್ತೆಯಲ್ಲಿದ್ದ ತಗ್ಗು ಗುಂಡಿಗಳಲ್ಲಿ ನರೇಂದ್ರ ಮೋದಿ ಹಾಗೂ ಜಗದೀಶ ಶೆಟ್ಟರ್ ಕಟೌಟ್​ಗೆ ಶಾಲು ಹೊದಿಸಿ, ಹೂ ಮಾಲೆ ಹಾಕಿ ಸನ್ಮಾನಿಸಿ, ಕಾಗದದ ದೋಣಿ ಹರಿಬಿಟ್ಟು ಪ್ರತಿಭಟನೆ ನಡೆಸಿದರು. ತಗ್ಗು ಗುಂಡಿಗಳು ಹಾಗೂ ಹಾಳಾದ ರಸ್ತೆ ದುರಸ್ತಿಗೊಳಿಸದ ಹಿನ್ನೆಲೆ ಈ ರೀತಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಈ ಕೂಡಲೇ ರಸ್ತೆ ಹಾಗೂ ತಗ್ಗು ಗುಂಡಿಗಳನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿದರು.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply