ಮಳೆಯ ರಭಸಕ್ಕೆ ಧರೆಗೆ ಉರುಳಿದ ಮರ: ಸಂಪರ್ಕ ಕಡಿತ…!

Spread the love

https://youtu.be/s-0Y7PQczGs

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ನಗರದ ಬಹುತೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಸುತ್ತಿದೆ.. ಸತತವಾಗಿ ಸುರಿದ ಮಳೆಗೆ ಮರವೊಂದು ಧರೆಗೆ ಉರುಳಿದ ಘಟನೆ ಭವಾನಿ ನಗರದ ಆಕೃತಿ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಡೆದಿದೆ. ಮರವು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಿತ್ಯ ನೂರಾರು ವಾಹನ ಸವಾರರ ಓಡಾಡುವ ರಸ್ತೆಯಲ್ಲಿಯೇ ಮರವು ನೆಲಕ್ಕೆ ಬಿದ್ದಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.
ಮಳೆ ಆಗುತ್ತಿದ್ದ ಪರಿಣಾಮ ಜನರ ಓಡಾಟ ವಿರಳವಿದ್ದಾಗ ಮರ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಭವಾನಿ‌ನಗರ- ದೇಶಪಾಂಡೆ ನಗರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.


Spread the love

About gcsteam

    Check Also

    10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ

    Spread the loveಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ …

    Leave a Reply