Breaking News

ಮತ್ತೆ ಉಡುಪಿ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರಕಾರ ಆದೇಶ

Spread the love

ಬೆಂಗಳೂರು : ಕೋವಿಡ್ ಸೋಂಕಿತರ ಟೆಸ್ಟ್‌ನಲ್ಲಿ ಪಾಸಿಟಿವಿಟಿ ದರ ಶೇ. 5 ಕ್ಕಿಂತಲೂ ಕಡಿಮೆ ದಾಖಲಾದ ಆರು ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಅನ್ ಲಾಕ್ ಘೋಷಣೆ ಮಾಡಿದೆ. ಹೀಗಾಗಿ 16 ಜಿಲ್ಲೆಗಳ ಜೊತೆಗೆ ಇದೀಗ ಮತ್ತೆ ಆರು ಜಿಲ್ಲೆಗಳು ಅನ್​ಲಾಕ್​ ಆಗಿವೆ. ಇಂದಿನಿಂದಲೇ ಈ ಆದೇಶ ಜಾರಿಯಲ್ಲಿರಲಿದೆ.
ಶಿವಮೊಗ್ಗ, ಉಡುಪಿ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಗೊಳಿಸಲಾಗಿದೆ. ಅನ್​ಲಾಕ್ ಪ್ರಕಾರ ಈ ಆರು ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ಸಂಜೆ 5 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಹುದಾಗಿದೆ. ಜನಸಂಚಾರ ಮತ್ತು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು. ಜುಲೈ 5ರ ಬೆಳಗ್ಗೆ 5ಗಂಟೆ ತನಕ ಈ ಅನ್​ಲಾಕ್ ಜಾರಿಯಲ್ಲಿರುತ್ತದೆ.‌ರಾಜ್ಯ ಸರ್ಕಾರದ ಮಹತ್ವದ ಆದೇಶಕಳೆದ ವಾರ ಅನ್​ಲಾಕ್​ ಘೋಷಣೆ ಮಾಡುವಾಗ ಈ ಆರು ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚಿಗೆ ಇದ್ದಿದ್ದರಿಂದ ಅನ್​ಲಾಕ್​ ಮಾಡಿರಲಿಲ್ಲ. ಆದರೆ, ನಿನ್ನೆ ಭಾನುವಾರ (ಜೂನ್​​ 20) ರಂದು ಕೋವಿಡ್ ಟೆಸ್ಟ್​ನಲ್ಲಿ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆ ದಾಖಲಾಗಿದ್ದರಿಂದ ಇಂದಿನಿಂದಲೇ ಅನ್ವಯವಾಗುವಂತೆ ಅನ್​ಲಾಕ್​​ ಪ್ರಕಟಿಸಿ ಕಂದಾಯ ಇಲಾಖೆ ಪ್ರಧಾನ‌ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.ಯಾವೆಲ್ಲ ಜಿಲ್ಲೆಗಳು ಅನ್​ಲಾಕ್​?ಮೊದಲ ಹಂತದಲ್ಲಿ ರಾಯಚೂರು, ಕೊಪ್ಪಳ, ಕಲಬುರಗಿ, ರಾಮನಗರ, ಉತ್ತರ ಕನ್ನಡ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಹಾವೇರಿ, ಬೀದರ್​, ಬೆಳಗಾವಿ, ಕೋಲಾರ, ಯಾದಗಿರಿ ಹಾಗೂ ಬಾಗಲಕೋಟೆ ಅನ್​ಲಾಕ್​​ ಆಗಿವೆ. ಇದೀಗ ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಅನ್​ಲಾಕ್​​ ಆಗಿವೆ.


Spread the love

About Karnataka Junction

[ajax_load_more]

Check Also

ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …

Leave a Reply

error: Content is protected !!