Breaking News

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ನಡೆಸುವದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ: ಜಗದೀಶ್ ಶೆಟ್ಟರ್

Spread the love

https://youtu.be/uBqtDe9zX3c

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವದು ಬಿಡುವದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ಆರು ತಿಂಗಳು ಯಾವುದೇ ಚುನಾವಣೆ ನಡೆಸದಂತೆ ಸಂಪುಟಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಸಭೆಯ‌ ನಿರ್ಧಾರವನ್ನ ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಪ್ರವಾಹ, ಬರ ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ಮುಂದೂಡಲು ಅವಕಾಶವಿದೆ. ನ್ಯಾಯಾಲಯದ ಗಮನಕ್ಕೆ ಈ ವಿಷಯ ತಂದ್ರೆ ಅದನ್ನ ನ್ಯಾಯಾಲಯ ಪರಿಗಣಿಸುವ ವಿಶ್ವಾಸವಿದೆ ಎಂದರು.
ಕೋವಿಡ್ ತಡೆಗಟ್ಟಲು ಪರಿಣಾಮಕಾರಿ ಕೆಲಸ ಮಾಡಿದ್ದಕ್ಕೆ ಈಗ ಕೋವಿಡ್ ಕಂಟ್ರೋಲ್‌ ಗೆ ಬರುತ್ತಿದೆ.
ಅನ್ ಲಾಕ್ ಮಾಡಿದ್ದಕ್ಕೆ ಜನರು ಮೈ ಮರೆಯಬಾರದು.
ಸರಕಾರದ ಜೊತೆಗೆ ಜನರ ಸಹಭಾಗಿತ್ವ ಇದ್ರೆ ಮಾತ್ರ ಕೋವಿಡ್ ಸಂಪೂರ್ಣವಾಗಿ ಹಿಮ್ಮೆಟ್ಟಿಸಲು ಸಾಧ್ಯ ಎಂದರು
ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾರಂಭ ಮಾಡಿದ್ರೆ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ನಾವು ಕೂಡ ಕಂಪನಿ ಮುಖ್ಯಸ್ಥರ ಜೊತೆ ಮಾತುಕತೆ ಮಾಡಿದ್ದೇವೆ. ಇಲ್ಲಿ ಕಂಪನಿ ಕಾರ್ಯಾರಂಭಕ್ಕೆ ಯಾವುದೇ ಅಡತಡೆಗಳಿಲ್ಲ. ಎಲ್ಲಾ ಮೂಲಭೂತ ಸೌಲಭ್ಯ ಒದಗಿಸಲಿದ್ದೇವೆ ಎಂದರು.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಾರಾ ಬೈಕ್ ರೆಂಟಲ್ ಆರಂಭ

Spread the love*ಹುಬ್ಬಳ್ಳಿ:* ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸಾರಾ ಬೈಕ್ ರೆಂಟಲ್ ಆರಂಭಗೊಂಡಿದ್ದು ಪ್ರವಾಸಿಗರು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು …

Leave a Reply

error: Content is protected !!