ಕಸಾಯಿಖಾನೆಗೆ ಕಳ್ಳಸಾಗಣೆಯಾಗುತ್ತಿದ್ದ 18 ಗೋವುಗಳ ರಕ್ಷಣೆ

Spread the love

https://youtu.be/FOuC4IRyKlQ

ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಜೊಳದಡಗಿ ಗ್ರಾಮದಿಂದ ಸೈದಾಪುರ ಮೂಲಕ ಹೈದರಾಬಾದ್ ಕಸಾಯಿಖಾನೆಗೆ ಕಳ್ಳಸಾಗಣೆಯಾಗುತ್ತಿದ್ದ ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ, ಜಿಲ್ಲೆಯಿಂದ ಟ್ರಕ್ ಮೂಲಕ 18 ಗೋವುಗಳನ್ನು ಹೈದರಾಬಾದ್ ಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸೈದಾಪುರ ಪೊಲೀಸರು, ವಾಹನವನ್ನು ಮಾರ್ಗ ಮಧ್ಯೆ ತಡೆಗಟ್ಟಿ ಗೋವುಗಳ ರಕ್ಷಣೆ ಮಾಡಿದ್ದಾರೆ.
ರಕ್ಷಣೆಯಾದ ಗೋವುಗಳನ್ನು ಗುರು ರಾಘವೇಂದ್ರ ಗೋ ಶಾಲೆಗೆ ಒಪ್ಪಿಸಲಾಗಿದೆ. ಪಿಎಸ್‍ಐ ಭೀಮರಾಯ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದು, ಗೋಹತ್ಯೆ ನಿಷೇಧ ಕಾನೂನಿನಡಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

About gcsteam

    Check Also

    ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು

    Spread the loveಹುಬ್ಬಳ್ಳಿ:  ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ …

    Leave a Reply