Breaking News

ಎಸ್ ಎಸ್ ಎಲ್ ಸಿ ಪರೀಕ್ಷೆ ಶಿಕ್ಷಣ ಸಚಿವರು, ಸಿಎಂ ಧ್ವಂದ ಹೇಳಿಕೆ ಕೈ ವಕ್ತಾರ ಗಂಗಾಧರ ಆಕ್ರೋಶ

Spread the love

ಹುಬ್ಬಳ್ಳಿ; ಕೊರೊನಾ ಎರಡನೇ ಅಲೆಯ ಸಂಕಷ್ಟ ಹಾಗೂ ಮೂರನೇ ಅಲೆ ಬರಬಹುದೆನ್ನುವ ಭೀತಿಯ ನಡುವೆ ಶಿಕ್ಷಣ ಸಚಿವ ಸುರೇಶಕುಮಾರ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನವರ ಹೇಳಿಕೆ ಗೊಂದಲಕ್ಕೀಡು ಮಾಡಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಸಮಿತಿ ವಕ್ತಾರ ಗಂಗಾಧರ ದೊಡವಾಡ ಆರೋಪಿಸಿದರು.
ಉಣಕಲ್ ನಲ್ಲಿ ಸೋಮವಾರ ಮಾತನಾಡಿದ ಅವರು,
ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ರದ್ದುಪಡಿಸಿದ ಕೇಂದ್ರ ಸರ್ಕಾರದ ನಡೆಯನ್ನೇ ಅನುಸರಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಬೇಕು. ಈಗಾಗಲೇ ಮಕ್ಕಳ ಮೇಲೆ ಕರೋನಾ ವ್ಯತಿರಿಕ್ತವಾದ ಪರಿಣಾಮ ಬೀರುವ ಸಾಧ್ಯತೆ ಇದ್ದು ಇದೀಗ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದಲೂ ವರದಿ ಸಲ್ಲಿಕೆಯಾಗಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಗೊಳಿಸಬೇಕೆಂದು ಆಗ್ರಹಿಸಲಾಗಿದೆ.ಇನ್ನೇನು ಶೈಕ್ಷಣಿಕ ವರ್ಷ ಆರಂಭಿಕ್ಕೆ ಕೇಲವೇ ದಿನಗಳು ಬಾಕಿ ಇವೆ ಆದಷ್ಟು ಬೇಗಾ ಈ ಕುರಿತು ನಿರ್ಧಾರ ಕೈಗೊಳ್ಳಲು ಆಗ್ರಹಿಸಿದರು.


Spread the love

About Karnataka Junction

[ajax_load_more]

Check Also

ಎಂ ಆರ್ ಸಿ ವಾರಿಯರ್ಸ್ ತಂಡ ಚಾಂಪಿಯನ್

Spread the loveಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಹಾಗೂ ವಿ ಎ ಕೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ …

Leave a Reply

error: Content is protected !!