Breaking News

ಕೋವೀಡ್ ಗೆ ಇನ್ನೋರ್ವ ಪತ್ರಕರ್ತ ಮುನೇಶ್ ಬಲಿ

Spread the love

ದಾವಣಗೆರೆ: ಪತ್ರಕರ್ತ ಹಾಗೂ ಪತ್ರಿಕೆಯ ಪುಟ ವಿನ್ಯಾಸ ತಂತ್ರಜ್ಞ ಎಚ್.ಎನ್. ಮುನೇಶ್ (52) ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಒಂದು ವಾರದ ಹಿಂದೆ ನಗರದ ಸಿ.ಜಿ. ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ ಹಾಗೂ ಒರ್ವ ಪುತ್ರಿ, ಅಪಾರ ಬಂದು-ಬಳಗ, ಗೆಳೆಯರನ್ನು ಅಗಲಿದ್ದಾರೆ. ಅವರ ಹುಟ್ಟೂರು ದಾವಣಗೆರೆ ತಾಲೂಕಿನ ಬಾಡಾ ಗ್ರಾಮದದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
ಪುಟ ವಿನ್ಯಾಸದಲ್ಲಿ ಅಪಾರ ಪರಿಣಿತಿ ಹೊಂದಿದ್ದ ಮುನೇಶ್ ಸಂಜೆವಾಣಿ, ಸಂಯುಕ್ತ ಕರ್ನಾಟಕ, ಕನ್ನಡ ಭಾರತಿ, ವಿಶ್ವವಾಣಿ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಈಗ ಈ ಸಂಜೆ ಪತ್ರಿಕೆಯಲ್ಲಿ ಪತ್ರಕರ್ತನಾಗಿ ಕರ್ತವ್ಯ ರ್ನಿವಹಿಸುತ್ತಿದ್ದರು.
ಮುನೇಶ್ ನಿಧನಕ್ಕೆ ಜಿಲ್ಲಾ ವರದಿಗಾರರ ಕೂಟ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ-ವಾರಣಾಸಿ ನಿಲ್ದಾಣಗಳ ನಡುವೆ ವಿಶೇಷ ರೈಲು

Spread the loveಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆ” ದಟ್ಟಣೆ ನಿವಾರಿಸಲು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬ ಉತ್ತರ ಪ್ರದೇಶದ …

Leave a Reply

error: Content is protected !!