ಹುಬ್ಬಳ್ಳಿ; ನಗರದ ಖಾಸಗಿ ಹೋಟೇಲ್ ನಲ್ಲಿ ಬಿಜೆಪಿಯ ಚುನಾವಣಾ ನಿವ೯ಹಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರು ಹಾಗೂ ಚುನಾವಣಾ ವೀಕ್ಷಕರಾದ ನಿಮ೯ಲಕುಮಾರ ಸುರಾನಾ ಮಾತನಾಡಿ ಮುಂಬರುವ ಚುನಾವಣೆಯಲ್ಲಿ ರಾಜ್ಯ ಹಾಗೂ ಮಹಾನಗರ ಅಭಿವೃದ್ಧಿ ಕಾಯ೯ ಮುಂದುವರೆಸಲು ಮತ್ತೆ ಕಮಲವನ್ನು ಅರಳಿಸಬೇಕಾಗಿದೆ ಎಂದ ಅವರು ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿವ೯ಹಿಸಬೇಕೆಂದರು. ಈ ಸಂದಭ೯ದಲ್ಲಿ ರಾಜ್ಯ ಪ್ರಧಾನ ಕಾಯ೯ದಶಿ೯ ಮಹೇಶ ಟೆಂಗಿನಕಾಯಿ,ಶಾಸಕರು ಹಾಗೂ ಮಹಾನಗರ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ,ಧಾರವಾಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ವಿರೇಶ ಸಂಗಳದ, ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
