Breaking News

ಹುಬ್ಬಳ್ಳಿ ಫಾರೆಸ್ಟ್ ಕಾಲೋನಿ ನೃಪತುಂಗಬೆಟ್ಟದಲ್ಲಿ ಕಾಣಿಸಿಕೊಂಡ ಚ ಲದ್ದಿ ಹೈದ್ರಾಬಾದ್ ಸಿಸಿಎಂಬಿ ಪ್ರಯೋಗಾಲಯಕ್ಕೆ ರವಾನೆ

Spread the love

ಹುಬ್ಬಳ್ಳಿ: ನಗರದ ನೃಪತುಂಗ ಬೆಟ್ಟ ಸುತ್ತ ಹಾಗೂ ಧಾರವಾಡ ತಾಲೂಕು ಕವಲಗೇರಿಯಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಒಂದೆಯೋ, ಬೇರೆ ಬೇರೆಯೋ ಎಂದು ಖಚಿತ ಪಡಿಸಿಕೊಳ್ಳಲು ಅರಣ್ಯ ಇಲಾಖೆಯವರು ಅದರ ಮಲ (ಲದ್ದಿ)ವನ್ನು ಹೈದರಾಬಾದ್‌ನ ಸಿಸಿಎಂಬಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಅರಣ್ಯ ಇಲಾಖೆಯವರಿಗೆ ಹುಬ್ಬಳ್ಳಿಯಲ್ಲಿ ಕಾಣಿಸಿಕೊಂಡಿದ್ದ ಚಿರತೆಯ ಹೆಜ್ಜೆ ಗುರುತುಗಳು ಸ್ಪಷ್ಟವಾಗಿ ಸಿಕ್ಕಿಲ್ಲ. ಆದರೆ ಕವಲಗೇರಿಯಲ್ಲಿ ಸ್ಪಷ್ಟವಾಗಿ ದೊರೆತಿದ್ದು, ಅದರ ಅಳತೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಸಿಕ್ಕಿರುವ ಚಿರತೆಯ ಹೆಜ್ಜೆ ಗುರುತು ಹಾಗೂ ಕವಲಗೇರಿಯಲ್ಲಿ ದೊರೆತ ಹೆಜ್ಜೆ ಕುರುಹುಗಳನ್ನು ಸಂಗ್ರಹಿಸಿ ಶುಕ್ರವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ರಾಜನಗರದ ಕೇಂದ್ರೀಯ ವಿದ್ಯಾಲಯ ಪ್ರಾಂಗಣದಲ್ಲಿ ಕಾಣಿಸಿಕೊಂಡ ಮೂರು ದಿನಗಳ ಬಳಿಕ ಸೋಮವಾರ ಸಂಜೆ ಶಿರಡಿ ನಗರ ಹನುಮಾನ ಮಂದಿರ ಬಳಿ ಚಿರತೆ ಪ್ರತ್ಯಕ್ಷವಾಗಿ ಹಂದಿ ಹಿಡಿದುಕೊಂಡು ಹೋಗಿತ್ತು. ಅಂದು ಅರಣ್ಯ ಇಲಾಖೆಯವರು ರಾತ್ರಿಯಿಡಿ ಪಟಾಕಿ ಸಿಡಿಸಿ, ಗರ್ನಾಲ್‌ ಹಾರಿಸಿ ಕಾರ್ಯಾಚರಣೆ ಮಾಡಿದ್ದರು. ಅದು ಭಯಗೊಂಡು ಅದೇ ದಿನ ಇಲ್ಲಿಂದ ಬಹುತೇಕವಾಗಿ ಕವಲಗೇರಿಗೆ ಪಲಾಯಗೈದಿರಬಹುದೆಂದು ಅರಣ್ಯ ಇಲಾಖೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.


Spread the love

About Karnataka Junction

[ajax_load_more]

Check Also

ರಾಜ್ಯ ಪ್ರಶಸ್ತಿಗೆ ಈರಪ್ಪ ಎಮ್ಮಿ ಆಯ್ಕೆ

Spread the loveರಾಜ್ಯ ಪ್ರಶಸ್ತಿಗೆ ಈರಪ್ಪ ಎಮ್ಮಿ ಆಯ್ಕ ಹುಬ್ಬಳ್ಳಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ …

Leave a Reply

error: Content is protected !!