ಮಾರಕ ಕೊರೊನಾ 100 ವರ್ಷಗಳಲ್ಲೇ ಅತ್ಯಂತ ಭೀಕರ ಸಾಂಕ್ರಾಮಿಕ ರೋಗ
ನವದೆಹಲಿ: ದೇಶದ ಎಲ್ಲ ರಾಜ್ಯಗಳ 18 ವರ್ಷದ ಮೇಲ್ಪಟ್ಟ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ ಎಂದು ಹೇಳಿದದ್ದಾರೆ.
ಕೊರೊನಾದಿಂದಾಗಿ ನಮ್ಮ ಜೊತೆಗಿದ್ದ ಹಲವರನ್ನು ಕಳೆದುಕೊಂಡಿದ್ದೇವೆ. ಅಂತಹ ಕುಟುಂಬಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ವಿಶ್ವದ ಅನೇಕ ದೇಶಗಳಂತೆ ಭಾರತವೂ ಸಂಕಷ್ಟ ಎದುರಿಸುತ್ತಿದೆಇಡೀ ವಿಶ್ವವನ್ನು ಕಾಡುತ್ತಿರುವ ಮಾರಕ ಕೊರೊನಾ ಕಳೆದ 100 ವರ್ಷಗಳಲ್ಲೇ ಅತ್ಯಂತ ಭೀಕರ ಸಾಂಕ್ರಾಮಿಕ ರೋಗ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಆಧುನಿಕ ಜಗತ್ತು ಇಂತಹ ಮಹಾಮಾರಿಯನ್ನು ಎಂದೂ ಕಂಡಿರಲಿಲ್ಲ ಎಂದಿದ್ದಾರೆ. ಭಾರತ ಈ ಸಾಂಕ್ರಾಮಿಕ ರೋಗವನ್ನು ಹಲವು ಸ್ತರಗಳಲ್ಲಿ ಎದುರಿಸುತ್ತಿದೆ ಎಂದು ಹೇಳಿದ್ದಾರೆ.ಪ್ರಮುಖಾಂಶಗಳು
ಭಾರತ ತನ್ನ ಶಕ್ತಿ ಮೀರಿ ಕೊರೊನಾ 2ನೇ ಅಲೆ ವಿರುದ್ಧ ಹೋರಾಡಿದೆದೇಶದ ಆರೋಗ್ಯ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳು ಹೆಚ್ಚಾಗಿವೆಇಷ್ಟೊಂದು ಪ್ರಮಾಣದಲ್ಲಿ ಆಕ್ಸಿಜನ್ ಹಿಂದೆಂದೂ ಅಗತ್ಯವಿರಲಿಲ್ಲಈ ಬಾರಿ ಸಮರೋಪಾದಿಯಲ್ಲಿ ಆಕ್ಸಿಜನ್ ಸರಬರಾಜು ಆಗಿದೆಕೊರೊನಾ ಲಸಿಕೆ ಪ್ರತಿಯೊಬ್ಬರಿಗೂ ರಕ್ಷಾ ಕವಚವಾಗಿದೆನಾವು ಸ್ವತಃ ವ್ಯಾಕ್ಸಿನ್ ತಯಾರಿಸಲು ಸಾಧ್ಯವಾಗದೇ ಇದ್ದಿದ್ದರೆ ನಮ್ಮ ಸ್ಥಿತಿ ಏನಾಗುತ್ತಿತ್ತು?ಆ ಸ್ಥಿತಿಯನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಪ್ರಧಾನಿ ಕಳವಳ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ಲಸಿಕಾಕರಣ ಆಗಬೇಕಿದೆ:ದೇಶದಲ್ಲಿ ಸಂಪೂರ್ಣ ಲಸಿಕಾಕರಣ ಆಗಬೇಕು. ಇದು ವರ್ಷಗಟ್ಟಲೆ ಆಗಬಹುದು ಎಂಬ ಆತಂಕ ವ್ಯಕ್ತವಾಯಿತು. ಹೀಗಾಗಿಯೇ ಇಂದ್ರಧನುಷ್ ಯೋಜನೆಯ ಮೂಲಕ ಲಸಿಕೆ ಹಾಕುವ ಪ್ರಮಾಣ ಹೆಚ್ಚಿಸಿದೆವು. ಹೀಗಾಗಿ ಕೇವಲ 5 ವರ್ಷಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಯಿತು. ಈಗ 20 ಕೋಟಿಗೂ ಹೆಚ್ಚು ಲಸಿಕೆಗಳನ್ನ ನೀಡಲಾಗಿದೆ. ದೇಶಾದ್ಯಂತ ವ್ಯಾಪಕವಾಗಿ ನಡೆಯುತ್ತಿದೆ.ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಪರಿಸ್ಥಿತಿಯನ್ನು ಎದುರಿಸಿದ್ದೇವೆ.ಜಗತ್ತನ್ನು ಕಂಗೆಡಿಸಿರುವ ಅದೃಶ್ಯ ಅಥವಾ ರೂಪಾಂತರಿ ಸೋಂಕಿನ ವಿರುದ್ಧ ಹೋರಾಡಲು ನಮಗೆ ಇರುವ ಅತೀ ದೊಡ್ಡ ಅಸ್ತ್ರ ಅಂದರೆ ಅದು ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವುದು.ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿಯೂ ಭಾರತ ಕಡಿಮೆ ಅವಧಿಯಲ್ಲಿ ಲಸಿಕೆ ಅಭಿವೃದ್ಧಿಪಡಿಸಿದೆ.ವಿಶ್ವದಲ್ಲಿ ಅತೀ ಹೆಚ್ಚು ಲಸಿಕೆ ಭಾರತದಲ್ಲಿ ನೀಡಲಾಗುತ್ತಿದೆ. 130 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡುವುದು ಸವಾಲಿನ ಕೆಲಸವಾಗಿದೆ.ಕೋವಿಡ್ ಈ ಶತಮಾನದ ಅತೀ ದೊಡ್ಡ ಮಹಾಮಾರಿಯಾಗಿದೆ. ಇಂತಹ ವೈರಸ್ ಹಿಂದೆಂದೂ ಕಂಡಿರಲಿಲ್ಲ. ಒಂದೇ ವರ್ಷದಲ್ಲಿ ಎರಡು ಲಸಿಕೆಗಳನ್ನು ಕಂಡು ಹಿಡಿದಿದ್ದೇವೆ. ದೇಶದಲ್ಲಿ 23 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ್ದೇವೆ. ಇದೀಗ ಕೋವಿಡ್ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ.ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಹೆಚ್ಚಳ:ಕಳೆದ ಒಂದೂವರೆ ವರ್ಷಗಳಲ್ಲಿ ಕೋವಿಡ್ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳಲ್ಲಿ ಬಹಳಷ್ಟು ಸುಧಾರಣೆಯಾಗಿದೆ. ಮೆಡಿಕಲ್ ಆಕ್ಸಿಜನ್ನ ಇಷ್ಟೊಂದು ಕೊರತೆ ಎಂದು ಆಗಿರಲಿಲ್ಲ ಎಂದರು. ವಿಶ್ವದ ಅನೇಕ ದೇಶಗಳಂತೆ ಭಾರತವೂ ಸಂಕಷ್ಟ ಎದುರಿಸುತ್ತಿದೆ. ಭಾರತ ತನ್ನ ಶಕ್ತಿ ಮೀರಿ ಕೊರೊನಾ 2ನೇ ಅಲೆ ವಿರುದ್ಧ ಹೋರಾಡುತ್ತಿದೆ ಎಂದು ಪ್ರಧಾನಿ ಹೇಳಿದರು. ಸೇನೆಯ ಮೂರೂ ತುಕಡಿಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾದವು. ವಿಶ್ವದ ಮೂಲೆ ಮೂಲೆಗಳಿಂದ ನಾನಾ ರಾಷ್ಟ್ರಗಳು ನೀಡಿದ ಸಹಾಯವನ್ನು ಮೂಲೆ ಮೂಲೆಗಳಿಂದ ಎಷ್ಟು ಸಾಧ್ಯವೋ ಅಷ್ಟು ಪೂರೈಸಲು ಪ್ರಯತ್ನ ಮಾಡಿದೆ.ಕೋಟ್ಯಂತರ ರೂ. ರೋಗ ನಿರ್ಮೂಲನೆಗೆ ಖರ್ಚು ಮಾಡಿದ್ದೇವೆ ಎಂದರು.