ಕ್ರೈಸ್ತ ಸಮುದಾಯಕ್ಕೆ ಮತಾಂತರ ಆರೋಪ: ಆರೋಪಿ‌ ಬಂಧನಕ್ಕೆಆಗ್ರಹಿಸಿ ಹುಧಾ ರಸ್ತೆ ಬಂದ್ ಮಾಡಿ ಪ್ರತಿಭಟನೆ

Spread the love

ಹುಬ್ಬಳ್ಳಿ: ಇಲ್ಲಿನ ಭೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಮತಾಂತರಕ್ಕೆ ಪ್ರಚೋದನೆ‌ ಮಾಡುತ್ತಿದ್ದ ಸೋಮಲಿಂಗ ಅವರಾದಿ ಎಂಬಾತನನ್ನು‌ ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ಹುಬ್ಬಳ್ಳಿ ಧಾರವಾಡ ನಡುವಿನ ರಸ್ತೆ ಸಂಪೂರ್ಣ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಮಾಡಲಾಗುತ್ತಿದೆ ಎಂದು ಸಂಘಟನೆಯವರು ಆರೋಪಿಸಿದರು. ಸೋಮಲಿಂಗ ಕ್ರೈಸ್ತ ಸಮುದಾಯದ ಪಾಸ್ಟರ್ ಆಗಿ ಬದಲಾಗಿದ್ದಾನೆ. ಇದನ್ನು ವಿರೋಧಿಸಿ ಪ್ರಾರ್ಥನಾ ಮಂದಿರದ ಹೊರಗೆ ಸಂಘಟನೆಯವರು ಭಜನೆ ಮಾಡಿದರು.
ಈ ವೇಳೆ ಕ್ರಿಶ್ಚಿಯನ್ನರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆ ಪೊಲೀಸರು ಬಂದಿದ್ದಾರೆ.
ಮತಾಂತರಕ್ಕೆ ಪ್ರಚೋದನೆ ನೀಡಿದ ಸೋಮು ಅವರಾದಿಯನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಪೊಲೀಸ್ ಠಾಣೆ ಆವರಣಕ್ಕೆ ಕರೆದುಕೊಂಡು ‌ಬಂದರೂ ಪೊಲೀಸರು‌ ಬಂಧಿಸಿಲ್ಲ. ತಕ್ಷಣವೇ ಬಂಧಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟು ಸಂಘಟನೆಯವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ‌ಮುಂದುವರಿಸಿದ್ದಾರೆ.
ಪೊಲೀಸ್‌ ಠಾಣೆಯ ಸಮೀಪದಲ್ಲಿಯೇ ಆರೋಪಿ ಸೋಮು ಅವರ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ಅವರಿಂದ ತಪ್ಪಿಸಿಕೊಂಡ ಸೋಮು ಅವರು ಅಂಬುಲೆನ್ಸ್‌ ಹತ್ತಿ ಆಸ್ಪತ್ರೆಗೆ ತೆರಳಿದರು.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply