ಸಣ್ಣ ಸಣ್ಣ ಅಧಿಕಾರಿಗಳ ಮೇಲೆ ಕ್ರಮ ಸರಿಯಲ್ಲ- ವಿಪ ಸಭಾಪತಿ ಬಸವರಾಜ ಹೊರಟ್ಟಿ

Spread the love

ಧಾರವಾಡ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ದೂರು ದಾಖಲು ಪ್ರಕರಣ ಕುರಿತ ಧಾರವಾಡ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು ವಿಚಾರಕ್ಕೆ ಸ್ವತಃ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಜ. ೨೫ಕ್ಕೆ‌ ನನ್ನ ಮೇಲೆ ದೂರು ದಾಖಲಾಗಿತ್ತು.‌ ಈ ವಿಷಯವನ್ನು ಎಳೆದುಕೊಂಡು ಹೋಗಬಾರದು ಎಂದು ನಾ ಏನು ಈ ಕುರಿತು ಮಾತನಾಡಿಲ್ಲ ಎಂದು ಹೊರಟ್ಟಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಪಿಯವರು ನನ್ನ ಬಳಿ ಬಂದು ಕ್ಷಮೆ ಕೇಳಿದ್ದಾರೆ. ನಾನು ಜ.೨೫ ರಂದು ಧಾರವಾಡದಲ್ಲಿ ಇರಲಿಲ್ಲ. ಈ ಹಿಂದೆಯೂ ನನ್ನ ಮೇಲೆ ಎಸ್ಸಿ/ಎಸ್ಟಿ ದೂರು‌ ಕೂಡ ಇಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು. ನಾನು ಬೆಂಗಳೂರಿನಲ್ಲಿ ಇದ್ದರು ನನ್ನ ಮೇಲೆ ಅಟ್ರಾಸಿಟಿ ದೂರು ಕೊಟ್ಟಿದ್ದರು. ಸದನದಲ್ಲಿಯೂ ‌ಬಜೆಟ್ ವಿಚಾರ ಚರ್ಚಿಸುವಾಗ ಕೆಲ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಿದರು. ನಾನು ಸದನದಲ್ಲಿದ್ದೆ. 10 ನಿಮಿಷದ ಬಳಿಕ ನಾನು ತೆರಳಿರುವುದಾಗಿ ಹೇಳಿದ್ದಾರೆ ಎಂದರು.ತಪ್ಪು ಮಾಡಿದವರ ಮೇಲೆ ಕ್ರಮ‌ ಕೈಗೊಳ್ಳಬೇಕು. ಈ ವಿಷಯದಲ್ಲಿ ತಳಮಟ್ಟದ ಅಧಿಕಾರಿಗಳನ್ನು ಬಲಿಪಶು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಈ ಪ್ರಕರಣ ಕುರಿತು ನಾನು ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತನಾಡುತ್ತೇನೆ. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದರು.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply