Breaking News

ದಾರಿ ನಡುವೆಯೇ ಆಕ್ಸಿಜನ್ ಕೊರತೆಯಿಂದ ಬಾಣಂತಿ ಸಾವು

Spread the love

ಬೆಳಗಾವಿ : ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಧಾರವಾಡ ಜಿಲ್ಲಾಸ್ಪತ್ರೆಗೆ ‌ಕರೆದೊಯ್ಯುವ ವೇಳೆ ಆಕ್ಸಿಜನ್ ಖಾಲಿಯಾಗಿ ಬಾಣಂತಿ ಸಾವನ್ನಪ್ಪಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸವದತ್ತಿ ಪಟ್ಟಣದ ನಿವಾಸಿ ವಿದ್ಯಶ್ರೀ ಸುರೇಶ ಬೆಂಚಿಗೇರಿ (25) ಸಾವನ್ನಪ್ಪಿದ ಬಾಣಂತಿ. ವಿದ್ಯಾಶ್ರೀ ಏಪ್ರಿಲ್ 04 ರಂದು ಸದವತ್ತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಮಹಿಳೆ ಮತ್ತು ಮಗುವಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆಯನ್ನೂ ಮಾಡಿಸಿದ್ದರು. ಚೊಚ್ಚಲ ಮಗುವಿಗೆ ಜನ್ಮವಿತ್ತ ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದರು. ಆದ್ರೆ, ಇಂದು ಇದ್ದಕ್ಕಿದ್ದಂತೆ ವಲ್ಮರಿ ಎಂಬೋಲಿಸಂ ಸಮಸ್ಯೆ (ಬಾಣಂತಿಗೆ ಉಸಿರಾಟದ ಸಮಸ್ಯೆ) ಕಾಣಿಸಿಕೊಂಡಿದೆ. ಸಾವಿಗೀಡಾದ ಮಹಿಳೆ
ತಕ್ಷಣ ಆರೈಕೆ ಮಾಡಿದ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸೂಚಿಸಿದ್ದಾರೆ. ಆದರೆ, ಮಹಿಳೆಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್‌ನಲ್ಲಿದ್ದ ಸಿಲಿಂಡರ್‌ನಲ್ಲಿ ಆಕ್ಸಿಜನ್‌ ಖಾಲಿ ಆಗಿದ್ದು ಮಹಿಳೆ 30 ಕಿ.ಮಿ. ದೂರ ಹೋಗುವಷ್ಟರಲ್ಲೇ ಕೊನೆಯುಸಿರೆಳೆದರು.
ಈ ಘಟನೆ ಸಂಬಂಧ ಮೃತಳ ತಂದೆ ಶ್ರೀಶೈಲ ಬಸಪ್ಪ ದಿನ್ನಿಮನಿ ಹಾಗೂ ಸಹೋದರ ಬಸವರಾಜ ದಿನ್ನಿಮನಿ ಪ್ರತಿಕ್ರಿಯಿಸಿ, ‘ಈ ಪರಿಸ್ಥಿತಿ ಯಾರಿಗೂ ಬರಬಾರದು. ಈ ಕುರಿತು ಸೂಕ್ತ ತನಿಖೆ ಆಗಬೇಕು‌ ಎಂದು ಆಗ್ರಹಿಸಿದರು. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ-ವಾರಣಾಸಿ ನಿಲ್ದಾಣಗಳ ನಡುವೆ ವಿಶೇಷ ರೈಲು

Spread the loveಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆ” ದಟ್ಟಣೆ ನಿವಾರಿಸಲು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬ ಉತ್ತರ ಪ್ರದೇಶದ …

Leave a Reply

error: Content is protected !!