Breaking News

2 ಕೋಟಿ ಅನುದಾನದಲ್ಲಿ 1.25 ಕೋಟಿ ಗುಳುಂ-ದಿಂಗಾಲೇಶ್ವರ ಶ್ರೀ ಆರೋಪ

Spread the love

ಗದಗ: ಫಕೀರ್ ದಿಂಗಾಲೇಶ್ವರ ಶ್ರೀ ಸರ್ಕಾರದ ವಿರುದ್ಧ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಶಿರಹಟ್ಟಿ ಫಕೀರೇಶ್ವರ ಮಠಕ್ಕೆ ಹತ್ತು ವರ್ಷಗಳ ಹಿಂದೆ ಬಿಡುಗಡೆಯಾದ 2 ಕೋಟಿ ರೂ. ಅನುದಾನದಲ್ಲಿ 1.25 ಕೋಟಿ ಹಣ ಗುಳುಂ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಾನು ನೇಮಕಗೊಂಡ ಶಿರಹಟ್ಟಿ ಫಕೀರೇಶ್ವರ ಮಠಕ್ಕೆ ಯಡಿಯೂರಪ್ಪ ಕಾಲದಲ್ಲಿ 2 ಕೋಟಿ ಅನುದಾನವನ್ನು ಬಜೆಟ್​​ನಲ್ಲಿ ಇಟ್ಟಿದ್ದರು. ಆದ್ರೆ ಅದು ಡಿಸಿಯವರಿಂದ ನೇರವಾಗಿ ಬರಲಿಲ್ಲ ಎಂದು ಹೇಳಿದ್ದಾರೆ. ಗುತ್ತಿಗೆದಾರರು ಮಠದ ಪೂರ್ಣ ಕೆಲಸ ಮುಗಿಸಿದರೂ ಇದುವರೆಗೆ ಮುಕ್ಕಾಲು ಭಾಗ ಹಣ ಬಂದಿಲ್ಲ. ಕೇವಲ 75 ಲಕ್ಷ ಬಂದಿದೆ. ಉಳಿದ 1.25 ಕೋಟಿ ಹಣ ಎಲ್ಲಿಗೆ ಹೋಯ್ತು ಎಂದು ಪ್ರಶ್ನೆ ಮಾಡಿದ್ದಾರೆ. ಆ ಪ್ರತಿಷ್ಠಿತ ಮಠಾಧೀಶರಿಗೆ ಡಿಸಿಯವರಿಂದ ನೇರವಾಗಿ ಹಣ ಹೋಗುವುದಾದರೆ ಶಿರಹಟ್ಟಿ ಮಠಕ್ಕೆ ಈ ಅನ್ಯಾಯ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಉತ್ತರ ಕರ್ನಾಟಕದ ಮಠಗಳಿಗೆ ಸರ್ಕಾರದಿಂದ ಅನ್ಯಾಯವಾಗಿದೆ. ಉತ್ತರ ಕರ್ನಾಟಕದ ಶಾಸಕರೊಬ್ಬರು ಸದಾಕಾಲ ಸರ್ಕಾರದ ವಿರುದ್ಧ ಯಡಿಯೂರಪ್ಪ ವಿರುದ್ಧ ಮಾತನಾಡ್ತಾನೇ ಇದ್ರು. ಸ್ವಪಕ್ಷದ ಶಾಸಕರೊಬ್ಬರು ತಮ್ಮ ಸರ್ಕಾರದ ವಿರುದ್ಧ ತಮ್ಮ ನಾಯಕನ ವಿರುದ್ಧ ಮಾತನಾಡುವಾಗ ತುಟಿಕ್ ಪಿಟಿಕ್ ಅನ್ನದೇ, ಈಗ ನನ್ನ ವಿರುದ್ಧ ಹರಿಹಾಯ್ತಿದ್ದಾರೆ.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ-ವಾರಣಾಸಿ ನಿಲ್ದಾಣಗಳ ನಡುವೆ ವಿಶೇಷ ರೈಲು

Spread the loveಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆ” ದಟ್ಟಣೆ ನಿವಾರಿಸಲು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬ ಉತ್ತರ ಪ್ರದೇಶದ …

Leave a Reply

error: Content is protected !!