ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದೆ. ಸೋಮವಾರಪೇಟೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಅಲ್ಲಲ್ಲಿ ಆಲಿ ಕಲ್ಲು ಮಳೆಯಾಗಿದೆ. ಜಿಲ್ಲೆಯ ಕುಂದಳ್ಳಿ ಗ್ರಾಮದಲ್ಲಿ ಸುಮಾರು 25 ಕೆ.ಜಿ.ತೂಕದ ಆಲಿಕಲ್ಲು ಬಿದ್ದಿದ್ದು, ಬೆಳಗ್ಗೆವರೆಗೆ ಕರಗದೇ ಇರೋದು ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.
ಮಳೆ – ಗಾಳಿಗೆ ಅನೇಕ ಕಡೆ ಕಾಫಿ ತೋಟದೊಳಗೆ ಮರಗಳು ನೆಲಕ್ಕುರುಳಿದ್ದು ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
