ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮತ್ತು ಉತ್ತರ ಕರ್ನಾಟಕದ ಹುಬ್ಬಳ್ಳಿ ಸಂಪರ್ಕಿಸುವ ವಿಮಾನ ಸೇವೆಗೆ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ವಾರದಲ್ಲಿ ಮೂರು ದಿನ ಈ ವಿಮಾನ ಸಂಚಾರ ನಡೆಸಲಿದೆ.
ಈ ಕುರಿತು ಮಾತನಾಡಿದ ಸಂಸದ ಪ್ರತಾಪಸಿಂಹ, ಮೈಸೂರು ಮತ್ತು ಹುಬ್ಬಳ್ಳಿ ನಡುವೆ ಸಂಚಾರ ಬೆಳೆಸುವ ಪ್ರಯಾಣಿಕರಿಗೆ ಇದೊಂದು ಉತ್ತಮ ಸೇವೆಯಾಗಿದ್ದು ವಾರದಲ್ಲಿ 3 ದಿನಗಳ ಕಾಲ ವಿಮಾನಯಾನ ಸೇವೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ‘ಉಡಾನ್ ಯೋಜನೆ’ ಜಾರಿಗೆ ತಂದಿದ್ದರಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಅನುಕೂಲವಾಯಿತು. ಪ್ರಯಾಣಿಕರ ಸಂಖ್ಯೆಯೂ ಕೂಡ ಹೆಚ್ಚಾಯಿತು. ಜೊತೆಗೆ ಈ ವಿಮಾನ ಸೇವೆ ಪ್ರಾರಂಭಕ್ಕೆ ಸಹಕಾರ ನೀಡಿದ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದಗಳು ಎಂದು ಹೇಳಿದರು. ಈ ಸಂದರ್ಭದಲ್ಲಿ ಮೇಯರ್ ಸುನಂದಾ ಪಾಲನೇತ್ರ, ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.
Check Also
ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ
Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …