Breaking News

ರಾಜೀವ್ ಗಾಂಧಿ ಹಂತಕನಿಗೆ ಬಿಡುಗಡೆ ಭಾಗ್ಯ

Spread the love

ದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಹಂತಕ ಪೆರಾರಿವಾಲನ್‌ನನ್ನು 31 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೆರಾರಿವಾಲನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ.

ಕ್ಷಮಾಪಣೆ ಅರ್ಜಿಯನ್ನು ನಿರ್ಧರಿಸುವಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 142 ಅಂದರೆ ಸುಪ್ರೀಂ ಕೋರ್ಟ್‌ಗೆ ಸಂವಿಧಾನವು ನೀಡಿರುವ ಅನಿರ್ದಿಷ್ಟ ಅಧಿಕಾರವನ್ನು ಚಲಾಯಿಸಿದೆ, ರಾಜ್ಯಪಾಲರ ವಿಳಂಬದ ನಂತರ ಎಜಿ ಪೆರರಿವಾಲನ್ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

1991 ರಲ್ಲಿ ಗಾಂಧಿ ಹತ್ಯೆಯ ಸಮಯದಲ್ಲಿ 19 ವರ್ಷ ವಯಸ್ಸಿನವರಾಗಿದ್ದ ಪೆರಾರಿವಾಲನ್, ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಲು ಬಾಂಬ್‌ನಲ್ಲಿ ಬಳಸಲಾದ ಎರಡು 9 ವೋಲ್ಟ್ ಬ್ಯಾಟರಿಗಳನ್ನು ಖರೀದಿಸಿದ ಆರೋಪ ಹೊತ್ತಿದ್ದರು. 1998 ರಲ್ಲಿ ಟಾಡಾ ನ್ಯಾಯಾಲಯವು ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಅದಾದ ಮರು ವರ್ಷ ಸುಪ್ರೀಂ ಕೋರ್ಟ್‌ ಶಿಕ್ಷೆಯನ್ನು ಎತ್ತಿಹಿಡಿಯಿತು. ಆದರೆ 2014 ರಲ್ಲಿ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು.


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!