ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ
ಸೇರ್ಪಡೆ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಹುಬ್ಬಳ್ಳಿ ಮಹಾನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಪಕ್ಷದ ಪದಾಧಿಕಾರಿಗಳು ಇಂದು ಆತ್ಮೀಯವಾಗಿ ಸನ್ಮಾನಿಸಿದರು.
ಶಾಸಕ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯ
ಅಶೋಕ ಕಾಟವೆ, ಬಿಜೆಪಿ ವಕ್ತಾರ ರವಿ ನಾಯಕ, ಮಹೇಂದ್ರ ಕೌತಾಳ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ
ರಾಜಣ್ಣ ಕೊರವಿ, ಬಸವರಾಜ ಕುಂದಗೋಳಮಠ, ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ಅನೇಕ ಪದಾಧಿಕಾ ರಿಗಳು ,ಕಾರ್ಯಕರ್ತರು ಭಾಗವಹಿಸಿದ್ದರು.
