ಎರಡೂವರೆ ವರ್ಷದ ಹಿಂದೆ ಮೃತಪಟ್ಟ ಯುವಕನ ಮೇಲೆ ಕೇಸ್

Spread the love

ಹೋಶಿಯಾರ್‌ಪುರ(ಪಂಜಾಬ್​) : ಆಮ್ ಆದ್ಮಿ ಪಕ್ಷದ ಸರ್ಕಾರ ರಚನೆಯಾದ ನಂತರ ಪಂಜಾಬ್ ಪೊಲೀಸರು ಡ್ರಗ್ಸ್ ಹಾವಳಿಗೆ ಕಡಿವಾಣ ಹಾಕಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಪೊಲೀಸರ ಒಂದು ಕ್ರಮ ಈಗ ಟೀಕೆ, ವಿವಾದಕ್ಕೆ ಕಾರಣವಾಗಿದೆ. ಡ್ರಗ್ಸ್​ ಸಾಗಣೆ ಆರೋಪದ ಮೇಲೆ 13 ಮಂದಿ ಮೇಲೆ ಎನ್​ಡಿಪಿಎಸ್​ ಕಾಯ್ದೆಯಡಿ ಕೇಸ್ ದಾಖಲಿಸಿದ್ದು, ಇದರಲ್ಲಿ ಎರಡೂವರೆ ವರ್ಷದ ಹಿಂದೆ ಮೃತಪಟ್ಟ ಯುವಕನ ಹೆಸರಿದೆ. ಇದು ಪೊಲೀಸರ ಕಾರ್ಯದ ಮೇಲೆಯೇ ಅನುಮಾನ ಮೂಡಿಸಿದೆ.

ಗರ್​ಶಂಕರ್ ಪೊಲೀಸರು ಮೇ 20 ರಂದು ಡೊನೊವಾಲ್ ಖುರ್ದ್ ಗ್ರಾಮದಲ್ಲಿ ಮಾದಕವಸ್ತು ಸಾಗಣೆ ಆರೋಪದ ಮೇಲೆ 4 ಜನರನ್ನು ಬಂಧಿಸಿದ್ದಾರೆ. 6 ಮಹಿಳೆಯರು ಸೇರಿದಂತೆ 13 ಜನರ ವಿರುದ್ಧ ಪ್ರಕರಣವೂ ದಾಖಲಿಸಿದ್ದಾರೆ. ಆದರೆ, ಎರಡೂವರೆ ವರ್ಷದ ಹಿಂದೆ ಮೃತಪಟ್ಟ ಗ್ರಾಮದ ಗುರುದೀಪ್​ ಸಿಂಗ್ ಎಂಬುವರ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ.


Spread the love

About gcsteam

    Check Also

    ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು

    Spread the loveಹುಬ್ಬಳ್ಳಿ:  ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ …

    Leave a Reply