ಬೆಳಗಾವಿ:ಹುಬ್ಬಳ್ಳಿ ಭೀಕರ ಅಪಘಾತ ದುರ್ಘಟನೆ ಮಾಸುವ ಮುನ್ನವೇ ಕುಂದಾನಗರಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದ, ಟ್ರಕ್ ಹಾಗೂ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ.
ನಿಪ್ಪಾಣಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಸ್ಥವನಿಧಿ ಘಾಟ್ ನಲ್ಲಿ ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಅದಗೊಂಡು ಬಾಬು (60), ಪತ್ನಿ ಛಾಯಾ (55), ಚಂಪಾತಾಯಿ ಮಗದುಮ್ (80) ಹಾಗೂ ಮಹೇಶ್ ಪಾಟೀಲ್ (23) ಮೃತರು.
ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ದೌಡಾಯಿಸಿದ್ದಾರೆ.
