Breaking News

ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಗೆ ನಕಲಿ ಎಸಿಬಿ ಡಿವೈಎಸ್​ಪಿ ಹೆಸರಿನಲ್ಲಿ ಕರೆ

Spread the love

ಬೆಂಗಳೂರು : ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಗೆ ಎಸಿಬಿ ಡಿವೈಎಸ್​ಪಿ ಹೆಸರಿನಲ್ಲಿ ಕರೆ ಮಾಡಿ ನಾಳೆ ಎಸಿಬಿ ದಾಳಿ ಮಾಡಲಿದ್ದು, ಇದನ್ನು ತಪ್ಪಿಸಲು ಹಣ ಹಾಗೂ ಗಿಫ್ಟ್ ನೀಡುವಂತೆ ಬೇಡಿಕೆಯಿಟ್ಟ ನಕಲಿ‌ ಎಸಿಬಿ ಅಧಿಕಾರಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಣ ಇಲಾಖೆಯ ಅಧೀನ‌ ಕಾರ್ಯದರ್ಶಿ ಧನಂಜಯ್ ಎಂಬುವರು ನೀಡಿದ ದೂರಿನ ಮೇರೆಗೆ ಅಪರಿಚಿತ ನಕಲಿ ಅಧಿಕಾರಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕಳೆದ‌ ಮೂರು ದಿನಗಳ ಹಿಂದೆ ಧನಂಜಯ್ ಅವರಿಗೆ ಕರೆ ಮಾಡಿದ ನಕಲಿ ಡಿವೈಎಸ್​​ಪಿ ನಿಮ್ಮ ವಿರುದ್ಧ ಡಿಡಿಪಿಐ, ಬಿಇಒಗಳು ಭ್ರಷ್ಟಾಚಾರ ಎಸಗಿರುವುದಾಗಿ ಆರೋಪಿಸಿ ಎಸಿಬಿಗೆ‌ ದೂರು ನೀಡಿದ್ದಾರೆ. ನಮ್ಮ ಅಧಿಕಾರಿಗಳು ನಿಮ್ಮ ಕಚೇರಿ ಹಾಗೂ ಮನೆ ಬಳಿ ಅಧಿಕಾರಿಗಳು ಸರ್ವೇ ನಡೆಸುತ್ತಿದ್ದಾರೆ‌ ಎಂದು ಹೇಳಿದ್ದಾರೆ.ಬಳಿಕ ಮತ್ತೊಮ್ಮೆ‌ ಕರೆ ಮಾಡಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಜತೆ ಮಾತನಾಡಿದ್ದು, ದಾಳಿ ನಡೆಯುವುದಿಲ್ಲ. ನಿಮ್ಮ‌ ಒಳ್ಳೆತನ ನೋಡಿ ನಿಮಗೆ ಸಹಾಯ ಮಾಡುತ್ತಿದ್ದೇನೆ.‌ ನಮ್ಮ‌ ಎಸಿಬಿ ತನಿಖಾಧಿಕಾರಿಗಳು ಶ್ರೀಲಂಕಾ ಪ್ರವಾಸ ಹೋಗುತ್ತಿದ್ದು, ಹಣ ಕೊಡುವಂತೆ ಬೇಡಿಕೆಯಿಟ್ಟಿದ್ದಾನೆ. ಇದೇ ರೀತಿ ಇತರೆ ಅಧೀನ ಕಾರ್ಯದರ್ಶಿಗಳಾದ ಶರಣಪ್ಪ ಹಾಗೂ ಪದ್ಮಿನಿ ಎಂಬುವರಿಗೂ ಕರೆ ಮಾಡಿದ್ದಾನೆ. ಆರೋಪಿಯ ಬಗ್ಗೆ ಅನುಮಾನಗೊಂಡ ಇವರು ಪೊಲೀಸರಿಗೆ ದೂರು ನೀಡಿದ್ದಾರೆ.


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!