Breaking News

ಜೋಶಿ ಅವರೇ ಎಸ್​ಡಿಪಿಐ, ಎಐಎಂಐಎಂ ನಾಗಪುರ ಕನೆಕ್ಷನ್ ಏನು ?

Spread the love

ಬೆಂಗಳೂರು: ಎಸ್​ಡಿಪಿಐ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಲ್ಹಾದ್ ಜೋಶಿ ಅವರಿಗೆ ಟಕ್ಲರ್ ಕೊಟ್ಟಿದ್ದಾರೆ..
ಟ್ವೀಟ್ ಮೂಲಕ ತಮ್ಮ ಕಿಡಿಕಾರಿರುವ ಅವರು, ಎಸ್​ಡಿಪಿಐ ಕಾಂಗ್ರೆಸ್ ಕೂಸು ಎಂದಿರುವ ಪ್ರಹ್ಲಾದ್​ ಜೋಶಿ ಯಾರ ಕಿವಿಗೆ ಹೂ ಮುಡಿಸುತ್ತಿದ್ದಾರೆ?. ಮುಸ್ಲಿಮರನ್ನು ಪ್ರಚೋದಿಸಿ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಡುತ್ತಿರುವ ಎಸ್​ಡಿಪಿಐ ಕಾಂಗ್ರೆಸ್ ಕೂಸಾಗಲು ಸಾಧ್ಯವೆ? ಎಸ್​ಡಿಪಿಐ ಮತ್ತು ಓವೈಸಿಯ ಎಐಎಂಐಎಂ ಪಕ್ಷ ಬಿಜೆಪಿಯ ಬಿ ಟೀಂ ಅನ್ನೋದು ದೇಶಕ್ಕೆ ಗೊತ್ತಿದೆ‌. ಈ ಬಗ್ಗೆ ಜೋಶಿಯವರು ಎದೆ ತಟ್ಟಿ ಹೇಳುತ್ತಾರೆಯೇ? ಎಂದು ಕೇಳಿದ್ದಾರೆ.
ಸಚಿವ ಪ್ರಹ್ಲಾದ್ ಜೋಶಿಯವರು ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಸ್​ಡಿಪಿಐ, ಓವೈಸಿಯ ಎಐಎಂಐಎಂ ಹಾಗೂ ನಾಗಪುರ ನಡುವಿನ ಕನೆಕ್ಷನ್ ಏನು ಎಂಬುದನ್ನು ತಿಳಿಸಲಿ. ಆರ್​ಎಸ್ಎಸ್​ ಕೃಪಾ ಪೋಷಿತ ನಾಟಕ ಮಂಡಳಿಯಲ್ಲಿ‌ ಎಸ್​ಡಿಪಿಐ ಪಾತ್ರವೇನು? ಓವೈಸಿಯ ರೋಲ್ ಏನು ಎಂಬುದು ದೇಶಕ್ಕೆ ತಿಳಿಯಲಿ. ಈ ಸಂಘಟನೆಗಳಿಗೆ ನಾಗಪುರದ ಕನೆಕ್ಷನ್ ಇಲ್ಲದಿದ್ದರೆ ಈ ಕೂಡಲೇ ಎಸ್​ಡಿಪಿಐ ಅನ್ನು ನಿಷೇಧಿಸಲಿ ಎಂದು ಆಗ್ರಹಿಸಿದ್ದಾರೆ.ಎಸ್​ಡಿಪಿಐನ ರಾಜಕೀಯ ಲಾಭ ಪಡೆಯುತ್ತಿರುವ ಬಿಜೆಪಿಯವರು‌ ಎಸ್​ಡಿಪಿಐ ಸಂಘಟನೆ ಕಾಂಗ್ರೆಸ್ ಕೂಸು ಎಂದು ಆರೋಪಿಸುವುದ್ಯಾಕೆ?. ಎಸ್​ಡಿಪಿಐ ಸಂಘಟನೆಯ ಬಗ್ಗೆ ಕಾಂಗ್ರೆಸ್‌ಗೆ ಯಾವ ಸಾಫ್ಟ್ ಕಾರ್ನರ್ ಇಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯ ಸರ್ಕಾರವೇ ಇದೆ. ಎಸ್​ಡಿಪಿಐ ಸಂಘಟನೆಯನ್ನು ನಿಷೇಧಿಸದಂತೆ ಬಿಜೆಪಿಯವರ ಕೈಕಟ್ಟಿ ಹಾಕಿರುವವರರು ಯಾರು? ತಾಕತ್ತಿದ್ದರೆ ನಿಷೇಧಿಸಲಿ ಎಂದು ಸವಾಲು ಹಾಕಿದ್ದಾರೆ.
ಎಸ್​ಡಿಪಿಐ ಸಂಘಟನೆ ಬಿಜೆಪಿಯ ಪಾಲಿಗೆ ಕಲ್ಪವೃಕ್ಷ ಇದ್ದಂತೆ. ಎಸ್​ಡಿಪಿಐ ಸಂಘಟನೆ ನಿಷೇಧವಾಗುವುದು ಬಿಜೆಪಿಯವರಿಗೂ ಸುತಾರಾಂ ಇಷ್ಟವಿಲ್ಲ. ಈ ಸತ್ಯ ಜೋಶಿಯವರಿಗೂ ಗೊತ್ತಿದೆ. ಆದರೂ ಜೋಶಿಯವರು ಜನರ ಕಣ್ಣಿಗೆ ಮಣ್ಣೆರೆಚಲು ಎಸ್​ಡಿಪಿಐನೊಂದಿಗೆ ಕಾಂಗ್ರೆಸ್‌‌ಗೆ ಸಂಬಂಧ ಕಲ್ಪಿಸುತ್ತಾರೆ. ಅಷ್ಟಕ್ಕೂ ಎಸ್​ಡಿಪಿಐ ಸಂಘಟನೆಯಿಂದ ಕಾಂಗ್ರೆಸ್‌ಗೆ ಏನು ಲಾಭ ಜೋಶಿಯವರೆ? ಎಂದು ಖಾರವಾಗಿ ಪ್ರಶ್ನೆ ಕೇಳಿದ್ದಾರೆ.


Spread the love

About Karnataka Junction

[ajax_load_more]

Check Also

ಕರ್ನಾಟಕ ರೈಲ್ವೆಗೆ ಕೇಂದ್ರ ಸರ್ಕಾರದಿಂದ ಯುಪಿಎ ಅವಧಿಗಿಂತ 9 ಪಟ್ಟು ಹೆಚ್ಚಿನ ಬಜೆಟ್*

Spread the love*- ಯುಪಿಎ ಸರ್ಕಾರ 5 ವರ್ಷದಲ್ಲಿ ವಾರ್ಷಿಕ 835 ಕೋಟಿ ನೀಡಿದ್ದರೆ; ಮೋದಿ ಸರ್ಕಾರದಿಂದ ಪ್ರಸ್ತುತ ಬಜೆಟ್ …

Leave a Reply

error: Content is protected !!