ಹುಬ್ಬಳ್ಳಿ; ಭಾರತೀಯ ಸ್ಟೇಟ್ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎರಡನೇ ವಲಯ ಸಮ್ಮೇಳನವನ್ನು
ನಗರದ ಗೋಕುಲ ರಸ್ತೆಯ ಚಹ್ವಾನ ಗ್ರೀನ್ ಗಾರ್ಡನ್ ದಲ್ಲಿ ಜೂನ್ 11 ರಂದು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಭಾರತೀಯ ಸ್ಟೇಟ್ ಬ್ಯಾಂಕ್ ಪರಿ ಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಪತ್ರಿಕಾ ಪ್ರಕಟಣೆ ನೀಡಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್ ಬೆಂಗಳೂರು ಕಾರ್ಯಾ ವ್ಯಾಪ್ತಿಯ ಪ್ರಧಾನ ವ್ಯವಸ್ಥಾಪಕರಾದ ಶಾಂತಾನು ಪೆಂಡಾಸೆ ಉದ್ಘಾಟನೆ ಮಾಡುವರು, ಮುಖ್ಯ ಅತಿಥಿಯಾಗಿ ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಆಗಮಿಸಲಿದ್ದು ಅತಿಥಿಗಳಾಗಿ ಹುಬ್ಬಳ್ಳಿ ಎಸ್ ಬಿಐ ನ ಆಡಳಿತ ಕಚೇರಿಯ 7,ರ ಉಪ ಪ್ರಧಾನ ವ್ಯವಸ್ಥಾಪಕರಾದ ಮನೀಸ್ ಬಿ. ಚಂದ್ರ, ವಿಶೇಷ ಆಮಂತ್ರಿತ್ರರಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ನ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಡಿ, ಅತಿಥಿ ಉಪನ್ಯಾಸಕರಾಗಿ ಆಹಾರ ಮತ್ತು ನಾಗರಿಕ ಇಲಾಖೆಯ ನಿವೃತ್ತ ಙಂಟಿ ನಿರ್ದೇಶಕರಾದ ಸದಾಶಿವ ಮರ್ಜಿ, ಭಾರತೀಯ ಸ್ಟೇಟ್ ಬ್ಯಾಂಕ್ ನ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿಜಯರಾಜ್ ಆಗಮಿಸುವರು.
ಭಾರತೀಯ ಸ್ಟೇಟ್ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉಪ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಅಷ್ಟೇಕರ್,
ಭಾರತೀಯ ಸ್ಟೇಟ್ ಬ್ಯಾಂಕ್ ನ ಪರಿಶಿಷ್ಟ ಮತ್ತು ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಅಜಯ್ ತಳವಾರ, ಮಲ್ಲಪ್ಪ ತಳವಾರ, ರವಿಕುಮಾರ್ ಮಿಶಿ, ವಿಶಾಲ ನಾಯಕ, ಗಂಗಾಧರ ಕಲಕನಿ, ಮಧುರಾ ಶಿರ್ಶಿಕರ್ ಸೇರಿದಂತೆ ಮುಂತಾದವರು ಭಾಗವಹಿಸುವರು.
