Breaking News

ಖಾಸಗಿ ಕಂಪನಿಗೆ ನೀರು ಸರಬರಾಜು ಹೊಣೆ ವಿರೋಧಿಸಿ ಎಎಪಿ ಪ್ರತಿಭಟನೆ

Spread the love

ಹುಬ್ಬಳ್ಳಿ: ಅವಳಿನಗರದಲ್ಲಿ ನೀರು ಪೂರೈಕೆ ಮತ್ತು ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿರುವುದನ್ನು ಖಂಡಿಸಿ, ಎಎಪಿ ಕಾರ್ಯಕರ್ತರು ಸರ್ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪಾಲಿಕೆಯ ಮುಖ್ಯ ಕಚೇರಿ ಎದುರು ಧರಣಿ ನಡೆಸಿದರು.
ಎಲ್ ಅಂಡ್ ಟಿ ಕಂಪನಿಗೆ ನೀರು ಪೂರೈಕೆಯ ಹೊಣೆಯನ್ನು ಕೊಟ್ಟಿರುವುದರ ಹಿಂದೆ, ಇಡೀ ವ್ಯವಸ್ಥೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಅಡಗಿದೆ. ಇದರಿಂದಾಗಿ, ಮಹಾನಗರದ ಜನರು ಕುಡಿಯುವ ನೀರಿಗಾಗಿ ಹೆಣಗಾಡುವ ಸ್ಥಿತಿ ಬಂದಿದೆ. ಸಾರ್ವಜನಿಕ ನಳಗಳು ಬಂದ್ ಆಗಿ, ಬಡವರು ಪರದಾಡುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.
ನೀರಿನ ಸಮಸ್ಯೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಇತ್ತೀಚೆಗೆ ಎಲ್ ಅಂಡ್ ಟಿ ಜೊತೆಗೆ ಸರಣಿ ಸಭೆ ಮಾಡಿರುವುದು ಸಮಸ್ಯೆಯ ಗಂಭೀರತೆಯನ್ನು ತಿಳಿಸುತ್ತದೆ. ಪಕ್ಷ ಕೂಡ ಜೀವಜಲ ಜನ ಜಾಗೃತಿ ಅಭಿಯಾನವನ್ನು ಅವಳಿನಗರದಲ್ಲಿ ನಡೆಸಲಿದೆ. ನೀರು ಪೂರೈಕೆಯ ಖಾಸಗೀಕರಣದಿಂದಾಗುವ ಸಮಸ್ಯೆಗಳನ್ನು ಮನೆಮನೆಗೆ ತಿಳಿಸುವ ಕೆಲಸ ಮಾಡಲಿದೆ ಎಂದರು.
ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಖಾಸಗಿ ಕಂಪನಿ ಜೊತೆ ಮಾಡಿಕೊಂಡಿರುವ ಒಪ್ಪಂದವನ್ನು ರದ್ದುಗೊಳಿಸಬೇಕು. ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು. ವಿಕಾಸ ಸೊಪ್ಪಿನ, ಆಪ್ ಜಿಲ್ಲಾ ಅಧ್ಯಕ್ಷರಾದ ಅನಂತಕುಮಾರ ಬುಗಡಿ ಹಾಗೂ ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಅಧ್ಯಕ್ಷರಾದ
ಮಲ್ಲಿಕಾರ್ಜುನಯ್ಯ ಹಿರೇಮಠ, ಭಾಷಾ ಹುಸೇನ್ ತಲೆವಾಡ, ಮಲ್ಲಪ್ಪಾ ತಡಸದ, ರೇವಣಸಿದ್ದಪ್ಪ ಹುಬ್ಬಳ್ಳಿ, ಶಶಿಕುಮಾರ ಸುಳ್ಳದ, ಹಸನ್ ಇನಾಮದಾರ, ಕುಮಾರ ನೂಲ್ವಿ, ಶ್ರೀರಂಗ ಮುತಾಲಿಕ ದೇಸಾಯಿ, ಎ.ಬಿ. ಬಿರಾದಾರ. ಮುಂತಾದವರು ಇದ್ದರು.


Spread the love

About Karnataka Junction

[ajax_load_more]

Check Also

ಸಾರಿಗೆ ಸಿಬ್ಬಂದಿಗೆ ಸುರಕ್ಷಾ ಚಾಲಕ ಬ್ಯಾಡ್ಜ್ ಪ್ರದಾನ

Spread the loveNWKSRTC MD ಪ್ರಿಯಾಂಗ್ ಅಭಿನಂದನೆ ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಪಘಾತ ಹಾಗೂ ಅಪರಾಧ …

Leave a Reply

error: Content is protected !!