Breaking News

ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣೆಯ ಪೂರ್ವಭಾವಿ ಸಭೆ

Spread the love

ಹುಬ್ಬಳ್ಳಿ- ಹುಬ್ಬಳ್ಳಿ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ, ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣೆಯ ಧಾರವಾಡ ಗ್ರಾಮೀಣ ಜಿಲ್ಲೆಯ ಚುನಾವಣಾ ವೀಕ್ಷಕರಾದ ಪ್ರತಾಪ ಗೌಡ ಅವರು ಸಭೆ ನಡೆಸಿ ಪಕ್ಷದ ಆಂತರಿಕ ಚುನಾವಣೆ ಬಗ್ಗೆ ಚರ್ಚಿಸಿ, ಪ್ರಗತಿ ಪರಿಶೀಲಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಅನೀಲ್ ಪಾಟೀಲ್ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹನುಮಂತಪ್ಪ ಅಲಕೋಡ್, ಮಾಜಿ ಶಾಸಕರಾದ ಎಮ್. ಎಸ್ .ಅಕ್ಕಿ, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್ ಅಸೂಟಿ ಹಾಗೂ ಕೆಪಿಸಿಸಿಯ ಉಸ್ತುವಾರಿ ಪದಾಧಿಕಾರಿಗಳು, ಜಿಲ್ಲೆಯ ಕೆ.ಪಿ.ಸಿ.ಸಿ ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಜಿಲ್ಲಾ ಅಧ್ಯಕ್ಷರುಗಳು, ಬ್ಲಾಕ್ ರಿಟರ್ನಿಂಗ್ ಆಫೀಸರಗಳು, ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರುಗಳು ಮತ್ತು ಇತರೆ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು.


Spread the love

About Karnataka Junction

[ajax_load_more]

Check Also

ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ

Spread the love  ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ …

Leave a Reply

error: Content is protected !!