Breaking News

ನಾಳೆಯಿಂದ ಮೇ 4 ರವರಿಗೆ ಈ ಆದೇಶ ಜಾರಿ

Spread the love

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ವುತ್ತಿರುವ ಕೊರೊನಾ ನಿಯಂತ್ರಣಕ್ಕೆ ಲಾಕ್​​ಡೌನ್ ಬದಲಿಗೆ ನೈಟ್ ಕರ್ಫ್ಯೂ ಸೇರಿದಂತೆ ಕಠಿಣ ನಿಯನಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸರ್ವ ಪಕ್ಷಗಳ ಸಭೆಯಲ್ಲಿ ಚರ್ಚಿಸಿದ ನಂತರ ಹಾಗೂ ಪ್ರಧಾನಿ ಮೋದಿ ಭಾಷಣದ ಬಳಿಕ ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗ ಸೂಚಿಗಳನ್ನು ಹೊರಡಿಸಿದೆ. ಈ ಪ್ರಕಾರ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್​​ಡೌನ್ ಮಾಡದೇ ಇರಲು ನಿರ್ಧರಿಸಿದೆ. ಆದರೆ, ಲಾಕ್​​ಡೌನ್ ಬದಲಿಗೆ ರಾತ್ರಿ ಕರ್ಫ್ಯೂವನ್ನು ರಾಜ್ಯಾಾದ್ಯಂತ ಜಾರಿಗೆ ತರುವುದಾಗಿ ಘೋಷಿಸಿದೆ. ಹಾಗೆಯೇ ನೈಟ್ ಕರ್ಫ್ಯೂ ಅವಧಿಯು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯ ತನಕ ಇರಲಿದೆ. ಬೇರೆ ರಾಜ್ಯಗಳಲ್ಲಿ ಇರುವಂತೆ ರಾಜ್ಯದಲ್ಲಿಯೂ ವೀಕೆಂಡ್ (ವಾರಾಂತ್ಯ) ಕರ್ಫ್ಯೂ ಜಾರಿಗೆ ತರಲಾಗಿದೆ. ಇದು ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆಯ ತನಕ ಅನುಷ್ಠಾನದಲ್ಲಿ ಇರುತ್ತದೆ. ರಾಜ್ಯದಲ್ಲಿ ಲಾಕ್​​ಡೌನ್ ಹೇರಲಾಗದಿದ್ದರೂ ಸೆಮಿ ಲಾಕ್​​ಡೌನ್ ಮಾದರಿಯಲ್ಲಿ ಕೆಲವು ಕಠಿಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಶಾಲಾ – ಕಾಲೇಜು, ಸಿನಿಮಾ, ಜಿಮ್, ಯೋಗ ಸೆಂಟರ್, ಶಾಪಿಂಗ್ ಮಾಲ್​​ಗಳಲ್ಲಿನ ಚಟುವಟಿಕೆಗಳನ್ನು ಬಂದ್ ಮಾಡಲಾಗುತ್ತದೆ ಎಂದು ಮಾರ್ಗಸೂಚಿಯಲ್ಕಿ ತಿಳಿಸಲಾಗಿದೆ.


Spread the love

About Karnataka Junction

[ajax_load_more]

Check Also

ಕೇಂದ್ರ ಬಜೆಟ್ ದೇಶದ ಸಮಗ್ರ ಅಭಿವೃದ್ದಿಗೆ ನೀಲನಕ್ಷೆ- ಡಾ. ಕ್ರಾಂತಿ ಕಿರಣ್

Spread the love  ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಗುರಿಗೆ ಪೂರಕವಾಗಿ ಕೇಂದ್ರದ ವಿತ್ತ …

Leave a Reply

error: Content is protected !!