Breaking News

ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

Spread the love

ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ‌ ನಾಸೀರ ಹಿಸೇನ್ ರಾಜೀನಾಮೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ನಾಯಕರ ವಿರುದ್ಧ ಹಾಗೂ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ದಿನ ರಾಜ್ಯ ಸಭಾ ಚುನಾವಣೆ ನಡೆದ ನಂತರ ಕಾಂಗ್ರೆಸ್ ನಾಯಕರು ವಿಜಯೋತ್ಸವ ಮಾಡುತ್ತಿದ್ದರು. ನೂತನ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ನಾಸೀರ ಹುಸೇನ ಬೆಂಬಲಿಗರು ಮತ್ತು ಕಾಂಗ್ರೆಸ್ ನಾಯಕರು ಈ ವೇಳೆ ಇದ್ಧು, ಇಂತಹ ಸಂದರ್ಭದಲ್ಲಿ ನಾಸೀರ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಇದೂ ಕಾಂಗ್ರೆಸ್ ನಾಯಕರ ತುಷ್ಟೀಕರಣ ರಾಜಕಾರಣಕ್ಕೆ ಕೈಗನ್ನಡಿಯಾಗಿದೆ. ಈ ಕೂಡಲೇ ನೂತನವಾಗಿ ಆಯ್ಕೆಯಾದ ರಾಜ್ಯ ಸಭಾ ಸದಸ್ಯ ನಾಸೀರ ಹುಸೇನ್ ಅವರು ರಾಜೀನಾಮೆ ನೀಡಬೇಕು. ಜೊತೆಗೆ ಘೋಷಣೆ ಕೂಗಿದ ಎಲ್ಲರನ್ನು ತನಿಖೆಗೆ ಒಳಪಡಿಸಿ ಇದರ ಹಿಂದೆ ಇರುವ ಸತ್ಯ ಬಯಲಿಗೆ ತರಬೇಕು ಎಂದು ಆಗ್ರಹಿಸಿದರು.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿಯಲ್ಲಿ ರಂಗಪಂಚಮಿ ಅದ್ದೂರಿ ಆಚರಣೆ ಹಿನ್ನೆಲೆ- ಪೊಲೀಸ್ ರೌಡಿಶೀಟರ್ ಪರಿಶೀಲನೆ

Spread the loveಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಹೋಳಿ ಹಬ್ಬದ ಸಿದ್ಧತೆ ಜೋರಾಗಿದ್ದು, ಪೊಲೀಸ್ ಇಲಾಖೆ ಸಹ ಶಾಂತಿಯುತ ಹಬ್ಬದ …

Leave a Reply

error: Content is protected !!