ಹುಬ್ಬಳ್ಳಿ: ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಭುರಾಮ್ ರಸ್ತೆಗೆ ಇಳಿದು ಭದ್ರತೆ ಪರಿಶೀಲಿಸಿದರು. ಸ್ವತಃ ನಗರದ ರಾಣಿ ಚೆನ್ನಮ್ಮ, ರಾಯಣ್ಣ ಸರ್ಕಲ್ ಬಳಿ ಸಿಬ್ಬಂದಿಯೊಂದಿಗೆ ಕರ್ಪ್ಯೂ ಜಾರಿ ಹಿನ್ನೆಲೆಯಲ್ಲಿ ಅನಗತ್ಯವಾಗಿ ಅಡ್ಡಾಡುವವರಿಗೆ ತಾಕೀತು ಮಾಡಿದರು.ನಂತರ ತಮ್ಮನ್ನ ಭೇಟಿಯಾದ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅನಗತ್ಯವಾಗಿ ಮನೆಯಿಂದ ಜನರು ಹೊರಬರಬಾರದು ಈಗಾಗಲೇ ಜನರೇ ಸ್ವಯ ಪ್ರೇರಣೆಯಿಂದ ಅಂಗಡಿ ಮುಗ್ಗಟ್ಟು ಮುಚ್ಚಿಕೊಂಡು ಸಹಕರಿಸುತಿದ್ದಾರೆ. ನಾವು ಸಹ ಸರ್ಕಾರದ ನಿಯಮ ಜಾರಿಗೆಲ್ಲಎ ಕಡೆ ಬಂದೋಬಸ್ತ್ ಕೈಗೊಂಡಿದ್ದೇವೆ. ರಾತ್ರಿ 9 ಗಂಟೆಯೊಳಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದೇವೆ. ಕೊರೋನಾ ನಿಯಂತ್ರಣಕ್ಕೆ ಸಾರ್ವಜನಿಕರು ಕೈಜೋಡಿಸಿ ಎಂದು ತಿಳಿಸಿದರು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸ್ ನಂಬರ್ …