Breaking News

ಚಿಗರಿಯಲ್ಲಿ ಜಿಗಿಯುವವರಿಗೆ ನಾಳೆ ಮಧ್ಯಾಹ್ನ 1 ಗಂಟೆಯಿಂದ 4 ಗಂಟೆಯವರೆಗೆ ಬಂದ್

Spread the love

ಹುಬ್ಬಳ್ಳಿ: ಮಾರ್ಚ್ 1ರಂದು ಶುಕ್ರವಾರ ಧಾರವಾಡದ ಐ.ಐ.ಟಿ. ಕ್ಯಾಂಪಸ್ ನಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನೆಗಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳು ಆಗಮಿಸಲಿದ್ದಾರೆ. ಗೌರವಾನ್ವಿತರು ಹಾಗೂ ಇತರೆ ಗಣ್ಯರು ಬಿ.ಆರ್.ಟಿ.ಎಸ್.ಕಾರಿಡಾರ್ ನಲ್ಲಿ ಸಂಚರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸೂಚನೆಯ ಮೇರೆಗೆ ಮಧ್ಯಾಹ್ನ 1 ಗಂಟೆಯಿಂದ 4 ಗಂಟೆಯವರೆಗೆ ಚಿಗರಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗಿಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಕೋರಿದ್ದಾರೆ.


Spread the love

About Karnataka Junction

[ajax_load_more]

Check Also

ಮಾರ್ಚ್ ನಂತರ ಸಚಿವ ಸಂಪುಟ ಪುನರ್ ರಚನೆಯಾಗಲಿದೆ, ನಾನು ಸಚಿವ ಸ್ಥಾನದ ಆಕಾಂಕ್ಷೆ- ಕುಲಕರ್ಣಿ

Spread the loveಧಾರವಾಡ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಮಾರ್ಚ್ ನಂತರ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು, ಈ …

Leave a Reply

error: Content is protected !!