ಧಾರವಾಡ : ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಕೆ.ಎಸ್
ಈಶ್ವರಪ್ಪ ಜೊತೆ ಪಕ್ಷದ ಮುಖಂಡರು ಮಾತನಾಡುತ್ತಿದ್ದಾರೆ ಎಲ್ಲವೂ ಸರಿ ಹೋಗುತ್ತದೆ ಈಶ್ವರಪ್ಪ ಹಿರಿಯ, ಪಕ್ಷಕ್ಕೆ ಬದ್ಧತೆ ಇರುವ ನಾಯಕ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು
ಲೋಕಸಭೆ ಚುನಾವಣೆ ವಿಚಾರವಾಗಿ ಸಹ ಮಾತನಾಡಿದ ಅವರು
ನಮ್ಮ ಪ್ರಚಾರ ಜೋರಾಗಿ ನಡೆದಿದ್ದು
ನಾನು 4 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸವಿದೆ
ಜನರ ಸ್ಪಂದನೆ ಉತ್ತಮವಾಗಿದೆ.ಪ್ರಧಾನಿ ನರೇಂದ್ರ
ಮೋದಿ ಸರ್ಕಾರದಿಂದ ಆಗಿರುವ ಕೆಲಸ ಜನರೇ ಹೇಳುತ್ತಿದ್ದಾರೆ
ಕ್ಷೇತ್ರದಲ್ಲಿ ಆಗಿರುವ ಕೆಲಸಗಳ ಬಗ್ಗೆ ಜನರೇ ಹೇಳುತ್ತಿದ್ದಾರೆ ಬಹಳ ಸಂತೋಷವಾಗಿದೆ, ಚುನಾವಣೆಗೆ ಸಮಯ ಹೆಚ್ಚಿದೆಜನ ಈಗ ಬಿಜೆಪಿ, ಮೋದಿ, ಜೋಶಿಗೆ ವೋಟ್ ಹಾಕಲು ತುದಿಗಾಲ ಮೇಲೆ ನಿಂತಿದ್ದಾರೆ
ಆದರೆ ಮತದಾನದ ಅವಧಿಯೇ ದೂರ ಆದಂತಾಗಿದೆ ಅದು ಬಿಟ್ಟರೇ ಉಳಿದಿದ್ದೆಲ್ಲವೂ ನೆಮ್ಮದಿಯಿಂದ ನಡೆದಿದೆ ಎಂದರು.
*ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗದ ವಿಚಾರ* ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಕಾಂಗ್ರೆಸ್ ಗೆ ಬಹಳ ಕಡೆ ಅಭ್ಯರ್ಥಿಗಳೇ ಇಲ್ಲ ನಮ್ಮ ಕ್ಷೇತ್ರ ಸೇರಿ ಬಹಳ ಕಡೆ ಅವರಿಗೆ ಅಭ್ಯರ್ಥಿಗಳೇ ಇಲ್ಲಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗಿದ್ದಾರೆ ಎಂದರು. ಇನ್ನು
ಬಿಜೆಪಿಯಿಂದ ಕೆಲವರು ಹೊರಗೆ ಹೋಗುವ ವಿಚಾರವಾಗಿ ಮಾತನಾಡಿದ ಅವರು
ನಮ್ಮ ಪಕ್ಷದಲ್ಲಿ ಈ ಸಲ ಬಹಳ ಆಕಾಂಕ್ಷಿಗಳಾಗಿದ್ದರು ಹೀಗಾಗಿ ಸ್ವಲ್ಪ ಅಸಮಾಧಾನದ ಸಮಸ್ಯೆಯಾಗಿದೆ
ಪಕ್ಷದಿಂದ ಸ್ಪರ್ಧಿಸಿದವರು ಗೆಲ್ಲುವರೆಂಬ ವಿಶ್ವಾಸವಿದೆ
ಹೀಗಾಗಿ ಅಭ್ಯರ್ಥಿಯಾಗಲು ಪೈಪೋಟಿ ಇತ್ತು ಅಸಮಾಧಾನಿತರ ಜೊತೆ ಮಾತುಕತೆಗಳು ನಡೆದಿವೆ ಎಂದರು.
*ಮಹದಾಯಿ ರೈತರಿಂದ ಪ್ರಚಾರಕ್ಕೆ ಬಿಡುವುದಿಲ್ಲ ಎಂಬ ವಿಚಾರ*
ಮಹದಾಯಿ ರೈತರಿಂದ ಪ್ರಚಾರಕ್ಕೆ ಬಿಡುವುದಿಲ್ಲ ಎಂಬ ಹೇಳಿಕೆಯನ್ನ
ಆ ರೀತಿ ಯಾರೂ ಹೇಳಿಲ್ಲ ಎಂದ ಅವರು ವನ್ಯಜೀವಿ ಪ್ರದೇಶದ್ದೆ ಗೊಂದಲವಿದೆಮಹದಾಯಿ ವಿಷಯದಲ್ಲಿ ರಾಜ್ಯ ಸರ್ಕಾರ ಸೂಕ್ತ ಮಾಹಿತಿ ನೀಡುತ್ತಿಲ್ಲ ಇಲ್ಲಿಯವರೆಗೆ ಆಗಿದ್ದೆಲ್ಲ ಬಿಜೆಪಿಯೇ ಮಾಡಿದೆಕಾಂಗ್ರೆಸ್ ಏನೂ ಮಾಡಿಲ್ಲ, ತದ್ವಿರುದ್ಧವಾಗಿ ನಡೆದುಕೊಂಡು ಬಂದಿದೆ ಇಷ್ಟೊತ್ತಿಗೆ ಕೆಲಸ ಮುಗಿಬೇಕಿತ್ತುವನ್ಯಜೀವಿ ಮಂಡಳಿಯವರು ಸಮಯ ತೆಗೆದುಕೊಂಡಿದ್ದಕ್ಕೆ ವಿಳಂಬವಾಗಿದೆ.ಈ ಸಂಬಂಧ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕಿತ್ತು ಆದರೆಸ್ಪಷ್ಟವಾದ ವರದಿ ಕೊಡುವಲ್ಲಿ ವಿಳಂಬ ಮಾಡಿದೆ
ವನ್ಯಜೀವಿ ಮಂಡಳಿ ಸಮಸ್ಯೆ ಇತ್ಯರ್ಥವಾದರೆ ನಾವು ಕಾಮಗಾರಿ ಆರಂಭಿಸುತ್ತೇವೆ ಎಂದರು. ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ
ಮೋದಿ ಹುಬ್ಬಳ್ಳಿಗೂ ಬರಲಿದ್ದಾರೆ.ಹಾವೇರಿ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಚಾರ ನಡೆಯಲಿದೆ.3-4 ಕ್ಷೇತ್ರಗಳ ಪ್ರಚಾರ ಸೇರಿಸಿ ಹುಬ್ಬಳ್ಳಿಗೆ ಬರಲಿದ್ದಾರೆ ಎಂದರು.
