Breaking News

ಪೊಲೀಸರ ಆಟೋಟಪಕ್ಕೆ ಮಹಿಳೆ ಸಾವು- ಮೃತ ಸಂಬಂಧಿಕರ ಆರೋಪ

Spread the love

ಕಾರ್ಕಳ ;ನಗರದ ಸರ್ಕಾರಿ ಆಸ್ಪತ್ರೆಗೆ ಎದೆನೋವು ಮತ್ತು ಉಸಿರಾಟದ ತೊಂದರೆ ಇದೆ ಎಂದು ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಪೊಲೀಸರ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.
ತಾಲೂಕಿನ ನಲ್ಲೂರು ಗ್ರಾಮದ ಮಂಜುಳಾ(38) ಮೃತ ಮಹಿಳೆ. ಸೋಮವಾರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಮಹಿಳೆಯನ್ನು ಕಾರ್ಕಳದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಬಜಗೋಳಿ ಸಮೀಪದ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ಲಾಕ್‌ಡೌನ್‌ ನೆಪವೊಡ್ಡಿ ವಾಹನವನ್ನು ತಡೆದು ವಾಪಸ್ ಕಳುಹಿಸಿದ್ದರು ಎನ್ನಲಾಗಿದೆ.ಪೊಲೀಸರ ನಿರ್ಲಕ್ಷ್ಯ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಮಹಿಳೆ ಸಾವುಬಳಿಕ ಒಳರಸ್ತೆಯ ಮೂಲಕ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲೂ ವೈದ್ಯರಿಲ್ಲ ಎಂಬ ಕಾರಣ ನೀಡಿದ್ದರಿಂದ ಮಂಜುಳಾರಿಗೆ ತಕ್ಷಣಕ್ಕೆ ಚಿಕಿತ್ಸೆ ಲಭಿಸಿಲ್ಲ. ಇದರಿಂದ ಮಹಿಳೆ ಮೃತಪಟ್ಟಿರುವುದಾಗಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಜಗೋಳಿ ಸಮೀಪದ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ನಮ್ಮ ವಾಹನವನ್ನು ತಡೆದು ನಿಲ್ಲಿಸಿ, ಹಿಂದಿರುಗುವಂತೆ ಸೂಚಿಸಿದರು. ಆ ವೇಳೆ, ಮಂಜುಳಾರಿಗೆ ತೀವ್ರ ಎದೆನೋವು ಇತ್ತು. ಎಷ್ಟು ಗೋಗರೆದರೂ ಪೊಲೀಸರು ಅವಕಾಶ ನೀಡಲಿಲ್ಲ. ಬೇಕಾದರೆ 108 ಆ್ಯಂಬುಲನ್ಸ್‌ ಗೆ ಕರೆ ಮಾಡಿ, ಅದರಲ್ಲಿ ಕರೆದುಕೊಂಡು ಹೋಗಿ. ನಿಮ್ಮ ವಾಹನವನ್ನು ಬಿಡಲು ಸಾಧ್ಯವಿಲ್ಲ ಎಂದರು. ಆನಂತರ ನಾವು ಬೇರೆ ಒಳರಸ್ತೆಯಾಗಿ ಕಾರ್ಕಳ ತಲುಪಿದೆವು. ಆಸ್ಪತ್ರೆಗೆ ಬರುವುದು ತಡವಾದ್ದರಿಂದಲೇ ಮಂಜುಳಾರನ್ನು ನಾವು ಕಳೆದುಕೊಂಡೆವು ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ

Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …

Leave a Reply

error: Content is protected !!