ತಿರುಪತಿ; ನಗರದ ರುಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯತ್ಯಯದಿಂದಾಗಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ಸಿಎಂ ಜಗನ್ಮೋಹನ್ರೆಡ್ಡಿ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಪ್ರಸ್ತುತ ಇರುವ ಕೋವಿಡ್ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಸಿಎಂ ಈ ಪರಿಹಾರ ಘೋಷಿಸಿದ್ದಾರೆ.ಸೋಮವಾರ ತಡರಾತ್ರಿ ರುಯಾ ಆಸ್ಪತ್ರೆಯಲ್ಲಿ ಐಸಿಯು ಒಳಗೆ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ 11 ಕೋವಿಡ್ -19 ರೋಗಿಗಳು ಮೃತಪಟ್ಟಿದ್ದರು.ನೌಕಾಪಡೆಯ ಪೂರ್ವ ಕಮಾಂಡ್ ಇಂಜಿನಿಯರ್ಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿ, ಕೆಲ ಮಾರ್ಪಾಡುಗಳಿಗೆ ಸೂಚಿಸಿದ್ದಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸ್ ನಂಬರ್ …