Breaking News

ಐಪಿಎಸ್ ಅಧಿಕಾರಿಯಾಗಿದ್ದ ದಿ. ಮಧುಕರ್ ಶೆಟ್ಟಿ ನ್ಯಾಶನಲ್ ಪೊಲೀಸ್ ಅಕಾಡೆಮಿಯ ಲೆಕ್ಚರಲ್ ಹಾಲ್ ಮಧುಕರ್ ಶೆಟ್ಟಿ ನಾಮಕರಣ

Spread the love

ಬೆಂಗಳೂರು; ಹೈದರಾಬಾದ್​ನಲ್ಲಿರುವ ಸರ್ದಾರ್​ ವಲ್ಲಭಬಾಯಿ ನ್ಯಾಷನಲ್ ಪೊಲೀಸ್ ಅಕಾಡೆಮಿಗೆ ದಿವಂಗತ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಸರನ್ನಿಡಲಾಗಿದೆ.
ಹೈದರಾಬಾದ್​ನ​​ ರಾಷ್ಟೀಯ ಪೊಲೀಸ್ ಅಕಾಡೆಮಿಗೆ ದಿ.ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಸರು!ಕರ್ನಾಟಕದ ದಕ್ಷ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ಅವರ ಕಾರ್ಯದಕ್ಷತೆ, ಪ್ರಾಮಾಣಿಕತೆಗೆ ಸಮರ್ಪಣಾ ಮನೋಭಾವ ಕಂಡು ಅಕಾಡೆಮಿಯ ಲೆಕ್ಚರಲ್ ಹಾಲ್ ಮಧುಕರ್ ಶೆಟ್ಟಿ ಹೆಸರಿಟ್ಟಿದೆ.‌ ಈ ಮೂಲಕ ಪೊಲೀಸ್ ತರಬೇತಿ ಪಡೆಯುವ ಐಪಿಎಸ್ ಅಧಿಕಾರಿಗಳಿಗೆ ಅವರು ಸ್ಫೂರ್ತಿಯಾಗಲಿದ್ದಾರೆ.1999 ರ ಬ್ಯಾಚ್ ಕರ್ನಾಟಕ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದರು. ಕರ್ನಾಟಕದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ಕೆಲಸ ಮಾಡಿದ್ದರು. ಉಡುಪಿ ಜಿಲ್ಲೆಯವರಾಗಿದ್ದ ಶೆಟ್ಟಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯುವ ಮುನ್ನ ದೆಹಲಿಯ ಜವಾಹರಲಾಲ್​ ವಿಶ್ವವಿದ್ಯಾಲಯದಲ್ಲಿ (ಜೆಎನ್​ಯು) ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.ಮಧುಕರ್​ ಶೆಟ್ಟಿ ಅವರು ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲೂ ಪ್ರಾಮಾಣಿಕ ಅಧಿಕಾರಿಯಾಗಿ ಭ್ರಷ್ಟರಿಗೆ ಸಿಂಹ ಸ್ವಪ್ನವಾಗಿದ್ದರು. ಕೆಲ ವರ್ಷಗಳ ಬಳಿಕ ಅವರನ್ನು ಹೈದರಾಬಾದ್​ನ ರಾಷ್ಟ್ರೀಯ ಪೊಲೀಸ್​ ಅಕಾಡೆಮಿಗೆ ವರ್ಗಾವಣೆ ಮಾಡಲಾಗಿತ್ತು.


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!