Breaking News

ಅಪ್ರಾಪ್ರ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಆರೋಪಗಳ ಬಂಧನಕ್ಕೆ ಆಗ್ರಹಿಸಿ ಮನವಿ

Spread the love

ಹುಬ್ಬಳ್ಳಿ- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದವರನ್ನು ಬಂಧನಕ್ಕೆ ಆಗ್ರಹಿಸಿ ಮಂಗಳವಾರ ಹುಬ್ಬಳ್ಳಿ ತಹಸೀಲ್ದಾರ ಮೂಲಕ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅದೇ ಗ್ರಾಮದ ಕೆಲವು ಯುವಕರು ಪುಸಲಾಯಿಸಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಸಿಂದಗಿ ತಾಲೂಕು ಯಂಕಂಚಿ ಗ್ರಾಮದ ವಸತಿ ಗೃಹದಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿ ನಂತರ ಪರಾರಿಯಾಗಿದ್ದರು. ಪರಾರಿಯಾದ ದುಷ್ಕರ್ಮಿಗಳನ್ನು ಪೋಕ್ಸೋ ಕಾನೂನು ಅಡಿ ಬಂಧಿಸುವಂತೆ ಯಾದಗಿರಿ ಎಸ್ ಪಿ ಅವರಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮುಖಂಡರಾದ
ಫಕ್ಕೀರಪ್ಪ ಭೂಸದ, ಪ್ರಧಾನ ಕಾರ್ಯದರ್ಶಿಯ ಶಿವ ಶಂಕರ ಕಂಠಿ, ಜಂಟಿ ಕಾರ್ಯದರ್ಶಿ
ಲಿಂಗರಾಜ ಧಾರವಾಡಶೆಟ್ಟರ,
ಕಾರ್ಯದರ್ಶಿ ಮಲ್ಲಿಕಾರ್ಜುನ ಶಿರಗುಪ್ಪಿ,ಮುಂತಾದರಿದ್ದರು.


Spread the love

About Karnataka Junction

[ajax_load_more]

Check Also

ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ

Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …

Leave a Reply

error: Content is protected !!